Latest

ಮೋದಿಕೇರ್ ಎಂಬ ಚೈನ್ ಲಿಂಕ್ ದಂಧೆಗೆ ಬಿದ್ದಿರುವ ಮಧುಗಿರಿ, ಶಿರಾ ಶಿಕ್ಷಕರು.

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಬಿ ಆರ್ ಪಿ ಮತ್ತು ಸಿ ಆರ್ ಪಿ, ಶಿಕ್ಷಕರುಗಳು ಮೋದಿಕೇರ್ ಎಂಬ ಚೈನ್ ಲಿಂಕ್ ದಂಧೆಗೆ ಬಿದ್ದಿದ್ದು, ಅದರಲ್ಲಿ ಬರುವ ಕಮಿಷನ್ ಗಾಗಿ ಬಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಮೋದಿಕೇರ್ ಎಂಬುವುದು ಒಂದು ಚೈನ್ ಲಿಂಕ್ ಸಂಸ್ಥೆಯಾಗಿದ್ದು, ಇದರಲ್ಲಿ ಒಬ್ಬರು ಮತ್ತೊಬ್ಬರನ್ನು ಸೇರಿಸುತ್ತಾ ಹೋದಷ್ಟು ಹಾಗೂ ಸೇರಿಸಿದವರಲ್ಲಿ ಕೆಲವರು ಮೋದಿಕೇರ್ನಲ್ಲಿ ಸಿಗುವಂತಹ ವಸ್ತುಗಳನ್ನು ಕೊಂಡುಕೊಂಡಂತೆಲ್ಲಾ ಕಮಿಷನ್ ನೀಡುತ್ತಾರೆ. ಇದರ ಕಮಿಷನ್ ಆಸೆಗೆ ಬಿದ್ದ ಸಾಕಷ್ಟು ಶಿಕ್ಷಕರು ತಮ್ಮ ಕೆಲಸವನ್ನೇ ಮರೆತು ಬೆಳಗ್ಗೆ ರಾತ್ರಿ ಎನ್ನದೆ, ಮೋದಿಕೇರ್ ಸಂಸ್ಥೆಯನ್ನು ಬೆಳೆಸಲು ಮುಂದಾಗಿದ್ದಾರೆ.

ನೇತ್ರಾವತಿ .ಬಿ.ಆರ್.ಪಿ/ ಬಿ.ಆರ್.ಸಿ. ಕಚೇರಿ. ಮಧುಗಿರಿ ಹಾಗೂ ಪರಮೇಶ್. ಬಿ.ಆರ್.ಪಿ/ ಬಿ.ಆರ್.ಸಿ ಕಚೇರಿ, ಸಿರಾ. ಇವರುಗಳೂ ಸೇರಿದಂತೆ, ಹಲವರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು, ತಾಲ್ಲೂಕಿನ ಹಲವು ಶಿಕ್ಷಕರಿಗೆ ಮೋದಿ ಕೇರ್ ದಂಧೆ ಮಾಡಲು ಪ್ರೇರೇಪಿಸುತ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿದ್ದು, ಇವರುಗಳು ತಮ್ಮ ಸಂಬಂಧಿಕರ ಹೆಸರಿನಲ್ಲಿ ಚೈನ್ ಲಿಂಕ್ ಬ್ಯುಸಿನೆಸ್ ಮಾಡುತ್ತಿದ್ದಾರೆ.

ಇವರಿಬ್ಬರು ಮಾತ್ರವಲ್ಲದೆ ಈ ಜಾಲಕ್ಕೆ ಬಿದ್ದು, ತಮ್ಮ ಕೆಲಸವನ್ನೇ ಮರೆತಿರುವ ಸಾಕಷ್ಟು ಶಿಕ್ಷಕರಿದ್ದಾರೆ. ಈ ವಿಚಾರದ ಕುರಿತು ಸ್ಥಳೀಯರು ಶಿಕ್ಷಣ ಇಲಾಖೆಗೆ ದೂರನ್ನು ಸಹ ನೀಡಿರುತ್ತಾರೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ತನಿಖೆಗೆ ಮುಂದಾಗಿರುವುದಿಲ್ಲ.

ಸರ್ಕಾರಿ ಹುದ್ದೆಯಲ್ಲಿದ್ದರೂ ಸಹ ಯಾವುದೋ ಸಂಸ್ಥೆಯೊಂದು ಕಮಿಷನ್ ಕೊಡುತ್ತದೆ ಎಂಬ ಕಾರಣಕ್ಕೆ ತಮ್ಮ ಕೆಲಸವನ್ನು ದುರುಪಯೋಗ ಪಡಿಸಿಕೊಂಡು ಶಿಕ್ಷಕರನ್ನೆಲ್ಲ ಪ್ರಚೋದಿಸುವುದು ಮಾತ್ರವಲ್ಲದೆ ತಾವು ಸಹ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ ತಮ್ಮ ವೃತ್ತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಶಿಕ್ಷಕರ ಬಗ್ಗೆ ಮೇಲಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು.

ಸರ್ಕಾರಿ ಕೆಲಸದಲ್ಲಿದ್ದರೂ ಸಹ ಪ್ರಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡದೆ ಹಣ ಕೊಟ್ಟವರ ಬೂಟುನೆಕ್ಕಲು ಮುಂದಾಗಿರುವ ಇಂತಹ ನಾಲಾಯಕ್ ಗಳನ್ನು ಈ ಕೂಡಲೇ ತನಿಖೆಗೆ ಒಳಪಡಿಸಿ ಅಮಾನತ್ತು ಮಾಡಬೇಕು.

ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕೆಯ ಬಳಿ ಹಲವು ದಾಖಲೆಗಳು ಲಬ್ಯವಿದ್ದು. ಪೂರ್ಣ ವಿವರವಾದ ವರದಿಯನ್ನು ಶೀಘ್ರವಾಗಿ ಪ್ರಕಟಿಸಲಾಗುವುದು.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

14 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

19 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

19 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

19 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

19 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

19 hours ago