Categories: CrimeLatest

ಪತ್ನಿಗೆ ನಿದ್ದೆ ಮಾತ್ರೆ ಕೊಟ್ಟು ಪರಸ್ತ್ರೀಯೊಂದಿಗೆ ಸರಸ: ಶಿಕ್ಷಕನ ಕಾಮ ಪುರಾಣ ಬಯಲು

ಹುಬ್ಬಳ್ಳಿಯಲ್ಲಿ ಶಿಕ್ಷಕನೊಬ್ಬನ ವಿರುದ್ಧ ಪತ್ನಿಗೆ ಕಿರುಕುಳ ನೀಡಿದ್ದು ಹಾಗೂ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಜಯಪುರ ಮೂಲದ ಮಾಲಿಂಗಪ್ಪ ಎಂಬಾತ ಈ ಆರೋಪಕ್ಕೆ ಒಳಗಾಗಿದ್ದು, ಈ ಕುರಿತು ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಾಹಿತಿಯ ಪ್ರಕಾರ, ಮಾಲಿಂಗಪ್ಪ ಹುಬ್ಬಳ್ಳಿಯ ಎಲ್ಟಿ ತಾಂಡ ಪ್ರದೇಶದ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು, ತನ್ನ ಎದುರಿನ ಮನೆಯಲ್ಲಿದ್ದ ಮಹಿಳೆಯೊಂದಿಗೆ ಆಪ್ತ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಈ ಸಂಬಂಧದ ಬಗ್ಗೆ ತಿಳಿದ ಪತ್ನಿ ಕಾಂಚನ, ಗಂಡನ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾಳೆ.

ಕಾಂಚನ ಆರೋಪದಂತೆ, ಮಾಲಿಂಗಪ್ಪ ತನ್ನೊಂದಿಗೆ ವಿವಾಹವಾಗಿದ್ದರೂ ಪರಸ್ತ್ರೀಯೊಂದಿಗೆ ಸಂಬಂಧ ಮುಂದುವರಿಸಿಕೊಂಡು, ತನ್ನ ಮೇಲೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾನೆ. ಅಲ್ಲದೆ, ಮತ್ತೊಬ್ಬ ಮಹಿಳೆಯನ್ನು ಮನೆಗೆ ಕರೆತರಲು ತನ್ನ ಪತ್ನಿಗೆ ಬಲವಂತವಾಗಿ ನಿದ್ದೆ ಮಾತ್ರೆ ನೀಡುತ್ತಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಇಬ್ಬರಿಗೂ 2016ರಲ್ಲಿ ವಿವಾಹವಾಗಿದ್ದು, ದಂಪತಿಗೆ ಮೂರು ವರ್ಷದ ಮಗು ಇದೆ. ಈ ನಡುವೆಯೂ ಮಾಲಿಂಗಪ್ಪ ತನ್ನ ವರ್ತನೆ ಬದಲಿಸದೆ ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಲಾಗಿದೆ. ಗಂಡನ ಮೊಬೈಲ್‌ನಲ್ಲಿ ನಡೆದ ಸಂದೇಶ ವಿನಿಮಯವನ್ನು ಕಂಡು ಪತ್ನಿ ಮತ್ತಷ್ಟು ಬೆಚ್ಚಿಬಿದ್ದಿದ್ದಾಳೆ.

ಈ ವಿಷಯವನ್ನು ಪ್ರಶ್ನಿಸಿದಾಗ ಮಾಲಿಂಗಪ್ಪ ತನ್ನ ಪತ್ನಿಗೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆಗಳಿಂದ ಮನನೊಂದು ಕಾಂಚನ ಆತ್ಮಹತ್ಯೆಗೂ ಯತ್ನಿಸಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ನಂತರ ಮಾಲಿಂಗಪ್ಪ ತನ್ನ ಪತ್ನಿಯನ್ನು ತವರು ಮನೆಗೆ ಕಳುಹಿಸಿದ್ದಾನೆ ಎಂದು ಹೇಳಲಾಗಿದ್ದು, ಇದೀಗ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಕೌನ್ಸಿಲಿಂಗ್ ನೆಪದಲ್ಲಿ ಕ್ರಮ ಕೈಗೊಳ್ಳದೇ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪವನ್ನೂ ಕಾಂಚನ ಮಾಡಿದ್ದಾರೆ.

ಈ ಪ್ರಕರಣ ಇದೀಗ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದ್ದು, ಮಹಿಳಾ ಸಂಘಟನೆಗಳು ಸಂತ್ರಸ್ತೆಗೆ ಬೆಂಬಲ ಸೂಚಿಸಿ, ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿವೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

19 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

19 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

19 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

19 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

19 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

19 hours ago