Latest

ಮೋದಿಕೇರ್ ದಂಧೆಗೆ ಗುಲಾಮರಾಗಿದ್ದ ಶಿಕ್ಷಕರು ಅಮಾನತು

ಮೋದಿಕೇರ್ ಎಂಬ ಚೈನ್ ಲಿಂಕ್ ಕಂಪನಿಯಲ್ಲಿ ಸಾಕಷ್ಟು ಶಿಕ್ಷಕರು ಕೆಲಸ ಮಾಡುತ್ತಿರುವುದಾಗಿ ಡಿಡಿಪಿಐ ರವರ ಗಮನಕ್ಕೆ ಬಂದಿದ್ದು. ಈ ವಿಚಾರವಾಗಿ 16 ಶಿಕ್ಷಕರಿಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಯ ಬಳಿಕ 8 ಶಿಕ್ಷಕರು ಈ ಚೈನ್ ಲಿಂಕ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದ್ದು ಅವರನ್ನು ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ರವರು ಅಮಾನತು ಮಾಡಿದ್ದಾರೆ.
ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರವಿಕುಮಾರ್, ರಾಮಗಿರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀನಿವಾಸ್, ಹಿರಿಯೂರು ತಾಲೂಕು ಗುಯಿಲಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿದ್ದಮ್ಮ, ಪಾಲವನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂದ್ರಾಣಿ, ಹಿಂಡಸಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೈಲಜಾ, ಪರಮೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಂಜುಳಾ ಶ್ರೀನಿವಾಸ್, ರಂಗಪ್ಪ ಹಾಗೂ ಚಿತ್ರದುರ್ಗ ತಾಲೂಕಿನ ದೊಡ್ಡಲಘಟ್ಟದ ಸರಕಾರಿ ಪ್ರೌಢಶಾಲೆಯ ಶಿವಕುಮಾರ್ ಅಮಾನತುಗೊಂಡ ಶಿಕ್ಷಕರು.
ಇವರುಗಳು ಮಾತ್ರವಲ್ಲದೆ ಜಿಲ್ಲೆಯ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆಯ ಸಾಕಷ್ಟು ಶಿಕ್ಷಕರುಗಳು ಚೈನ್ ಲಿಂಕ್ ಕಂಪನಿಯ ವ್ಯವಹಾರದಲ್ಲಿ ತೊಡಗಿದ್ದು, ಮಕ್ಕಳು ಭವಿಷ್ಯ ರೂಪಿಸಬೇಕಾದಂತಹ ಶಿಕ್ಷಕರುಗಳು ತಮ್ಮ ಕೆಲಸವನ್ನು ದುರುಪಯೋಗ ಪಡಿಸಿಕೊಂಡು ಚೈನ್ ಲಿಂಕ್ ಕಂಪನಿಯ ಆನ್ಲೈನ್ ಸಭೆಗಳಲ್ಲಿ ಭಾಗಿಯಾಗಿ ಅವರುಗಳು ಹೇಳಿದಂತೆಲ್ಲ ಕೇಳಿ ಆ ಕಂಪನಿಯವರ ಗುಲಾಮರಾಗಿದ್ದಾರೆ. ಇದರಿಂದ ಮಕ್ಕಳ ಭವಿಷ್ಯಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ.
ಕೇವಲ 8 ಜನರು ಮಾತ್ರವಲ್ಲದೆ ಜಿಲ್ಲೆಯಲ್ಲಿ ಮತ್ತು ನಮ್ಮ ರಾಜ್ಯದಲ್ಲಿ ಸಾಕಷ್ಟು ಶಿಕ್ಷಕರುಗಳು ಇದರ ಜಾಲಕ್ಕೆ ಬಿದ್ದು ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸುವುದನ್ನೇ ಮರೆತಿದ್ದಾರೆ ಹಾಗೂ ತಮ್ಮ ಕೆಲಸವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.  ಈ ವಿಚಾರವಾಗಿ ಭ್ರಷ್ಟರ ಬೇಟೆ ಪತ್ರಿಕೆಯು ವೆಬ್ಸೈಟ್ನಲ್ಲಿ ಕೆಲವು ತಿಂಗಳ ಹಿಂದೆಯೇ ವರದಿಯನ್ನು ಮಾಡಿತು. ಹಾಗೂ ಭ್ರಷ್ಟರ ಬೇಟೆ ಪತ್ರಿಕೆಯ ಫೆಬ್ರವರಿ 2023ರ ಸಂಚಿಕೆಯಲ್ಲಿ “ಮೋದಿಕೇರ್ ದಂದೆಗೆ ಗುಲಾಮರಾದ ಶಿಕ್ಷಕರು” ಎಂಬ ಶೀರ್ಷಿಕೆ ಅಡಿಯಲ್ಲಿ ವರದಿಯನ್ನು ಸಹ ಪ್ರಕಟಿಸಿರುತ್ತದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಇವರುಗಳ ವಿರುದ್ಧವು ಸಹ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಿದೆ.

 

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

16 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

20 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

20 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

20 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

20 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

20 hours ago