ಮೋದಿಕೇರ್ ಎಂಬ ಚೈನ್ ಲಿಂಕ್ ಕಂಪನಿಯಲ್ಲಿ ಸಾಕಷ್ಟು ಶಿಕ್ಷಕರು ಕೆಲಸ ಮಾಡುತ್ತಿರುವುದಾಗಿ ಡಿಡಿಪಿಐ ರವರ ಗಮನಕ್ಕೆ ಬಂದಿದ್ದು. ಈ ವಿಚಾರವಾಗಿ 16 ಶಿಕ್ಷಕರಿಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಯ ಬಳಿಕ 8 ಶಿಕ್ಷಕರು ಈ ಚೈನ್ ಲಿಂಕ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದ್ದು ಅವರನ್ನು ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ರವರು ಅಮಾನತು ಮಾಡಿದ್ದಾರೆ.
ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರವಿಕುಮಾರ್, ರಾಮಗಿರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀನಿವಾಸ್, ಹಿರಿಯೂರು ತಾಲೂಕು ಗುಯಿಲಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿದ್ದಮ್ಮ, ಪಾಲವನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂದ್ರಾಣಿ, ಹಿಂಡಸಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೈಲಜಾ, ಪರಮೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಂಜುಳಾ ಶ್ರೀನಿವಾಸ್, ರಂಗಪ್ಪ ಹಾಗೂ ಚಿತ್ರದುರ್ಗ ತಾಲೂಕಿನ ದೊಡ್ಡಲಘಟ್ಟದ ಸರಕಾರಿ ಪ್ರೌಢಶಾಲೆಯ ಶಿವಕುಮಾರ್ ಅಮಾನತುಗೊಂಡ ಶಿಕ್ಷಕರು.
ಇವರುಗಳು ಮಾತ್ರವಲ್ಲದೆ ಜಿಲ್ಲೆಯ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆಯ ಸಾಕಷ್ಟು ಶಿಕ್ಷಕರುಗಳು ಚೈನ್ ಲಿಂಕ್ ಕಂಪನಿಯ ವ್ಯವಹಾರದಲ್ಲಿ ತೊಡಗಿದ್ದು, ಮಕ್ಕಳು ಭವಿಷ್ಯ ರೂಪಿಸಬೇಕಾದಂತಹ ಶಿಕ್ಷಕರುಗಳು ತಮ್ಮ ಕೆಲಸವನ್ನು ದುರುಪಯೋಗ ಪಡಿಸಿಕೊಂಡು ಚೈನ್ ಲಿಂಕ್ ಕಂಪನಿಯ ಆನ್ಲೈನ್ ಸಭೆಗಳಲ್ಲಿ ಭಾಗಿಯಾಗಿ ಅವರುಗಳು ಹೇಳಿದಂತೆಲ್ಲ ಕೇಳಿ ಆ ಕಂಪನಿಯವರ ಗುಲಾಮರಾಗಿದ್ದಾರೆ. ಇದರಿಂದ ಮಕ್ಕಳ ಭವಿಷ್ಯಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ.
ಕೇವಲ 8 ಜನರು ಮಾತ್ರವಲ್ಲದೆ ಜಿಲ್ಲೆಯಲ್ಲಿ ಮತ್ತು ನಮ್ಮ ರಾಜ್ಯದಲ್ಲಿ ಸಾಕಷ್ಟು ಶಿಕ್ಷಕರುಗಳು ಇದರ ಜಾಲಕ್ಕೆ ಬಿದ್ದು ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸುವುದನ್ನೇ ಮರೆತಿದ್ದಾರೆ ಹಾಗೂ ತಮ್ಮ ಕೆಲಸವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಭ್ರಷ್ಟರ ಬೇಟೆ ಪತ್ರಿಕೆಯು ವೆಬ್ಸೈಟ್ನಲ್ಲಿ ಕೆಲವು ತಿಂಗಳ ಹಿಂದೆಯೇ ವರದಿಯನ್ನು ಮಾಡಿತು. ಹಾಗೂ ಭ್ರಷ್ಟರ ಬೇಟೆ ಪತ್ರಿಕೆಯ ಫೆಬ್ರವರಿ 2023ರ ಸಂಚಿಕೆಯಲ್ಲಿ “ಮೋದಿಕೇರ್ ದಂದೆಗೆ ಗುಲಾಮರಾದ ಶಿಕ್ಷಕರು” ಎಂಬ ಶೀರ್ಷಿಕೆ ಅಡಿಯಲ್ಲಿ ವರದಿಯನ್ನು ಸಹ ಪ್ರಕಟಿಸಿರುತ್ತದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಇವರುಗಳ ವಿರುದ್ಧವು ಸಹ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…