Latest

ಪೂರ್ಣಗೊಳ್ಳದ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ: ಆತಂಕದಲ್ಲಿ ವಿದ್ಯಾರ್ಥಿಗಳು

ಪಟ್ಟಣದ “ವಿಜಡಂ ವಿಂಗ್ಸ್ ಇಂಗ್ಲಿಷ್ ಮೀಡಿಯಂ ಶಾಲೆ”ಯ ವಿದ್ಯಾರ್ಥಿಗಳನ್ನು ಇಟಿಗಿ ರಸ್ತೆಯಲ್ಲಿ ಭಾಗಶಃ ಹಂತದಲ್ಲಿರುವ ಕಟ್ಟಡದಲ್ಲಿ ಆಡಳಿತ ಮಂಡಳಿ ತರಗತಿ ಪ್ರಾರಂಭಿಸಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಕಟ್ಟಡದ ಮೂರನೇ ಮಹಡಿ ಕೆಲಸ ನಡೆಯುತ್ತಿದ್ದು ಅದರ ಕೆಳಗೆ ವಿದ್ಯಾರ್ಥಿಗಳ ಆಟ,ಪಾಠ ನಡೆಯುತ್ತಿದೆ.ಮಕ್ಕಳ ಜೀವದ ಮೇಲೆ ಚಲ್ಲಾಟ ಆಡುವ ರೀತಿಯಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ.ಈ ವ್ಯವಸ್ಥೆಯನ್ನು ಅವಲೋಕಿಸಿರುವ ಪೋಷಕರಲ್ಲಿ ಭಯ ಆತಂಕ ಆವರಿಸಿದೆ.

ಕಟ್ಟಡ ಕೆಲಸ ಬಾಕಿ ಇರುವಾಗಲೇ ವಿದ್ಯಾರ್ಥಿಗಳನ್ನು ಇಲ್ಲಿಗೆ ಕರೆ ತಂದಿರುವುದು ಆಡಳಿತ ಸಂಸ್ಥೆಯ ಬೇಜವಾಬ್ದಾರಿ ಎತ್ತಿ ತೋರುತ್ತಿದೆ ಎನ್ನುವ ಆರೋಪ ಪೋಷಕರದ್ದು.

ಸರಿಯಾದ ಮೈದಾನವಿಲ್ಲದೆ ಕಲ್ಲು ಕಸದಲ್ಲಿ,ಕಟ್ಟಡ
ಚಟುವಟಿಕೆಗಳನ್ನು ಕೈಗೊಂಡಿರುವ ಅವ್ಯವಸ್ಥೆಯಲ್ಲಿ ಕಲಿಕೆಯನ್ನು ಪ್ರಾರಂಭಿಸಿ ಮಕ್ಕಳ ಭವಿಷ್ಯಕ್ಕೆ ಅಪಾಯ ತಂದೊಡ್ಡುವ ನಿಟ್ಟಿನೊಳೆಗೆ ಆಡಳಿತ ಮಂಡಳಿ ಮುಂದಾಗಿದೆ,ಮಕ್ಕಳ ಭವಿಷ್ಯಕ್ಕಿಂತ ತಮ್ಮ ಶಾಲೆಯ ಕಟ್ಟಡ ಕಟ್ಟುವಂತದ್ದು ಈ ಶಿಕ್ಷಣ ಸಂಸ್ಥೆಗೆ ಪ್ರತಿಷ್ಠೆಯಾಗಿದೆ ಎಂಬ ಆಕ್ರೋಶ ಪೋಷಕರದ್ದು.

ಇಂತಹ ಅವ್ಯವಸ್ಥೆಯಲ್ಲಿ ತರಗತಿಗಳು ಪ್ರಾರಂಭಗೊಂಡಿದ್ದರು ಇಲ್ಲಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿಕುಳಿತಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯತೆಗೆ ಇಡಿದ ಕೈಗನ್ನಡಿ ಇದಾಗಿದೆ ಎಂಬ ಅಭಿಪ್ರಯ ಪ್ರಜ್ಞಾವಂತ ನಾಗರಿಕರದ್ದು.

ಅವಘಡ ಸಂಭವಿಸುವ ಮುನ್ನ ಶೀಘ್ರ ಸಂಬಂದ ಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೂಕ್ತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಬೇಕೆಂದು ಆಗ್ರಹಿಸಿದರು. ವರದಿ :ಮಣಿಕಂಠ ಬಿ

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago