ಪಟ್ಟಣದ “ವಿಜಡಂ ವಿಂಗ್ಸ್ ಇಂಗ್ಲಿಷ್ ಮೀಡಿಯಂ ಶಾಲೆ”ಯ ವಿದ್ಯಾರ್ಥಿಗಳನ್ನು ಇಟಿಗಿ ರಸ್ತೆಯಲ್ಲಿ ಭಾಗಶಃ ಹಂತದಲ್ಲಿರುವ ಕಟ್ಟಡದಲ್ಲಿ ಆಡಳಿತ ಮಂಡಳಿ ತರಗತಿ ಪ್ರಾರಂಭಿಸಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.
ಕಟ್ಟಡದ ಮೂರನೇ ಮಹಡಿ ಕೆಲಸ ನಡೆಯುತ್ತಿದ್ದು ಅದರ ಕೆಳಗೆ ವಿದ್ಯಾರ್ಥಿಗಳ ಆಟ,ಪಾಠ ನಡೆಯುತ್ತಿದೆ.ಮಕ್ಕಳ ಜೀವದ ಮೇಲೆ ಚಲ್ಲಾಟ ಆಡುವ ರೀತಿಯಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ.ಈ ವ್ಯವಸ್ಥೆಯನ್ನು ಅವಲೋಕಿಸಿರುವ ಪೋಷಕರಲ್ಲಿ ಭಯ ಆತಂಕ ಆವರಿಸಿದೆ.
ಕಟ್ಟಡ ಕೆಲಸ ಬಾಕಿ ಇರುವಾಗಲೇ ವಿದ್ಯಾರ್ಥಿಗಳನ್ನು ಇಲ್ಲಿಗೆ ಕರೆ ತಂದಿರುವುದು ಆಡಳಿತ ಸಂಸ್ಥೆಯ ಬೇಜವಾಬ್ದಾರಿ ಎತ್ತಿ ತೋರುತ್ತಿದೆ ಎನ್ನುವ ಆರೋಪ ಪೋಷಕರದ್ದು.
ಸರಿಯಾದ ಮೈದಾನವಿಲ್ಲದೆ ಕಲ್ಲು ಕಸದಲ್ಲಿ,ಕಟ್ಟಡ
ಚಟುವಟಿಕೆಗಳನ್ನು ಕೈಗೊಂಡಿರುವ ಅವ್ಯವಸ್ಥೆಯಲ್ಲಿ ಕಲಿಕೆಯನ್ನು ಪ್ರಾರಂಭಿಸಿ ಮಕ್ಕಳ ಭವಿಷ್ಯಕ್ಕೆ ಅಪಾಯ ತಂದೊಡ್ಡುವ ನಿಟ್ಟಿನೊಳೆಗೆ ಆಡಳಿತ ಮಂಡಳಿ ಮುಂದಾಗಿದೆ,ಮಕ್ಕಳ ಭವಿಷ್ಯಕ್ಕಿಂತ ತಮ್ಮ ಶಾಲೆಯ ಕಟ್ಟಡ ಕಟ್ಟುವಂತದ್ದು ಈ ಶಿಕ್ಷಣ ಸಂಸ್ಥೆಗೆ ಪ್ರತಿಷ್ಠೆಯಾಗಿದೆ ಎಂಬ ಆಕ್ರೋಶ ಪೋಷಕರದ್ದು.
ಇಂತಹ ಅವ್ಯವಸ್ಥೆಯಲ್ಲಿ ತರಗತಿಗಳು ಪ್ರಾರಂಭಗೊಂಡಿದ್ದರು ಇಲ್ಲಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿಕುಳಿತಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯತೆಗೆ ಇಡಿದ ಕೈಗನ್ನಡಿ ಇದಾಗಿದೆ ಎಂಬ ಅಭಿಪ್ರಯ ಪ್ರಜ್ಞಾವಂತ ನಾಗರಿಕರದ್ದು.
ಅವಘಡ ಸಂಭವಿಸುವ ಮುನ್ನ ಶೀಘ್ರ ಸಂಬಂದ ಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೂಕ್ತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಬೇಕೆಂದು ಆಗ್ರಹಿಸಿದರು. ವರದಿ :ಮಣಿಕಂಠ ಬಿ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…