Latest

ಪೂರ್ಣಗೊಳ್ಳದ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ: ಆತಂಕದಲ್ಲಿ ವಿದ್ಯಾರ್ಥಿಗಳು

ಪಟ್ಟಣದ “ವಿಜಡಂ ವಿಂಗ್ಸ್ ಇಂಗ್ಲಿಷ್ ಮೀಡಿಯಂ ಶಾಲೆ”ಯ ವಿದ್ಯಾರ್ಥಿಗಳನ್ನು ಇಟಿಗಿ ರಸ್ತೆಯಲ್ಲಿ ಭಾಗಶಃ ಹಂತದಲ್ಲಿರುವ ಕಟ್ಟಡದಲ್ಲಿ ಆಡಳಿತ ಮಂಡಳಿ ತರಗತಿ ಪ್ರಾರಂಭಿಸಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಕಟ್ಟಡದ ಮೂರನೇ ಮಹಡಿ ಕೆಲಸ ನಡೆಯುತ್ತಿದ್ದು ಅದರ ಕೆಳಗೆ ವಿದ್ಯಾರ್ಥಿಗಳ ಆಟ,ಪಾಠ ನಡೆಯುತ್ತಿದೆ.ಮಕ್ಕಳ ಜೀವದ ಮೇಲೆ ಚಲ್ಲಾಟ ಆಡುವ ರೀತಿಯಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ.ಈ ವ್ಯವಸ್ಥೆಯನ್ನು ಅವಲೋಕಿಸಿರುವ ಪೋಷಕರಲ್ಲಿ ಭಯ ಆತಂಕ ಆವರಿಸಿದೆ.

ಕಟ್ಟಡ ಕೆಲಸ ಬಾಕಿ ಇರುವಾಗಲೇ ವಿದ್ಯಾರ್ಥಿಗಳನ್ನು ಇಲ್ಲಿಗೆ ಕರೆ ತಂದಿರುವುದು ಆಡಳಿತ ಸಂಸ್ಥೆಯ ಬೇಜವಾಬ್ದಾರಿ ಎತ್ತಿ ತೋರುತ್ತಿದೆ ಎನ್ನುವ ಆರೋಪ ಪೋಷಕರದ್ದು.

ಸರಿಯಾದ ಮೈದಾನವಿಲ್ಲದೆ ಕಲ್ಲು ಕಸದಲ್ಲಿ,ಕಟ್ಟಡ
ಚಟುವಟಿಕೆಗಳನ್ನು ಕೈಗೊಂಡಿರುವ ಅವ್ಯವಸ್ಥೆಯಲ್ಲಿ ಕಲಿಕೆಯನ್ನು ಪ್ರಾರಂಭಿಸಿ ಮಕ್ಕಳ ಭವಿಷ್ಯಕ್ಕೆ ಅಪಾಯ ತಂದೊಡ್ಡುವ ನಿಟ್ಟಿನೊಳೆಗೆ ಆಡಳಿತ ಮಂಡಳಿ ಮುಂದಾಗಿದೆ,ಮಕ್ಕಳ ಭವಿಷ್ಯಕ್ಕಿಂತ ತಮ್ಮ ಶಾಲೆಯ ಕಟ್ಟಡ ಕಟ್ಟುವಂತದ್ದು ಈ ಶಿಕ್ಷಣ ಸಂಸ್ಥೆಗೆ ಪ್ರತಿಷ್ಠೆಯಾಗಿದೆ ಎಂಬ ಆಕ್ರೋಶ ಪೋಷಕರದ್ದು.

ಇಂತಹ ಅವ್ಯವಸ್ಥೆಯಲ್ಲಿ ತರಗತಿಗಳು ಪ್ರಾರಂಭಗೊಂಡಿದ್ದರು ಇಲ್ಲಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿಕುಳಿತಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯತೆಗೆ ಇಡಿದ ಕೈಗನ್ನಡಿ ಇದಾಗಿದೆ ಎಂಬ ಅಭಿಪ್ರಯ ಪ್ರಜ್ಞಾವಂತ ನಾಗರಿಕರದ್ದು.

ಅವಘಡ ಸಂಭವಿಸುವ ಮುನ್ನ ಶೀಘ್ರ ಸಂಬಂದ ಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೂಕ್ತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಬೇಕೆಂದು ಆಗ್ರಹಿಸಿದರು. ವರದಿ :ಮಣಿಕಂಠ ಬಿ

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago