ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು, ಬಾಡಿಗೆಗೆ ವಾಸವಿದ್ದ ದಂಪತಿಯನ್ನು ಬಂಧಿಸಿದ್ದಾರೆ.
ನಿವೃತ್ತ ಶಿಕ್ಷಕರಾದ ನಾಗಯ್ಯ ಹಾಗೂ ಮಂಜುಳಾ ದಂಪತಿ ಜೂನ್ 13ರಂದು ತಮ್ಮ ಮನೆಯನ್ನು ಬೀಗ ಹಾಕಿ ಮೈಸೂರಿಗೆ ತೆರಳಿದ್ದರು. ಇದೇ ವೇಳೆ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ ಮಂಜುನಾಥ್ ಮತ್ತು ನಯನ ದಂಪತಿ, ಮನೆಯಲ್ಲಿ ಯಾರೂ ಇಲ್ಲದ ಅವಕಾಶವನ್ನು ದುರುಪಯೋಗಪಡಿಸಿಕೊಂಡು ಕಳ್ಳತನ ಎಸಗಿದ್ದಾರೆ ಎನ್ನಲಾಗಿದೆ.
ಮನೆಯ ಬೀರುವಿನಲ್ಲಿ ಇಡಲಾಗಿದ್ದ ಸುಮಾರು 45 ಗ್ರಾಂ ತೂಕದ ಚಿನ್ನಾಭರಣವನ್ನು ಆರೋಪಿಗಳು ಕಳವು ಮಾಡಿದ್ದು, ಬಳಿಕ ಅದನ್ನು ‘ಅರ್ಟಿಕ್ ಗೋಲ್ಡ್ ಫೈನಾನ್ಸ್’ ಸಂಸ್ಥೆಗೆ ಮಾರಾಟ ಮಾಡಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಕಳವಾದ ಚಿನ್ನವನ್ನು ಸುಮಾರು 6 ರಿಂದ 8 ಲಕ್ಷ ರೂಪಾಯಿವರೆಗೆ ಮಾರಾಟ ಮಾಡಿ ಹಣವನ್ನು ಬಚ್ಚಿಟ್ಟಿದ್ದರು ಎಂಬ ಆರೋಪವೂ ಕೇಳಿಬಂದಿದೆ.
ಜೂನ್ 21ರಂದು ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಚಲನವಲನಗಳ ಮೇಲೆ ನಿಗಾ ಇಟ್ಟು ಕೊನೆಗೆ ಮಂಜುನಾಥ್ ಮತ್ತು ನಯನ ದಂಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಂಬಿಕೆ ಇಟ್ಟು ಮನೆಯಲ್ಲಿ ಬಾಡಿಗೆಗೆ ಇರಿಸಿದ್ದ ದಂಪತಿಯೇ ಮನೆ ಮಾಲೀಕರಿಗೆ ವಂಚನೆ ಮಾಡಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…