Latest

ಮಹಿಳೆಯ ಮೇಲೆ ಭೀಕರ ದಾಳಿ: ಕಣ್ಣು ಗುಡ್ಡೆ ಕಿತ್ತು ಕ್ರೂರ ಹಲ್ಲೆ!

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಜಗನಹಳ್ಳಿಯಲ್ಲಿ ಒಂದು ಭೀಕರ ಘಟನೆ ನಡೆದಿದೆ,  ದುಷ್ಕರ್ಮಿಗಳು ಯುವತಿಯನ್ನು ಕಿಡ್ನಾಪ್ ಮಾಡಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಮಹಿಳೆಯನ್ನು ತೋಟದ ಮನೆಯಲ್ಲಿ ಬಂದು ಬರ್ಬರವಾಗಿ ಹಲ್ಲೆ ನಡೆಸಿ, ಕಣ್ಣಿಗೆ ಗಂಭೀರ ಗಾಯ ಮಾಡುವಂತಹ ಕ್ರೂರ ಕೃತ್ಯವೆಸಗಿದ್ದಾರೆ.

ಕಿಡ್ನಾಪ್ ಮಾಡಿ ಕ್ರೂರ ಹಿಂಸೆ!

ಸ್ಥಳೀಯ ಮಾಹಿತಿಯ ಪ್ರಕಾರ, ದಾಳಿಗೀಡಾದ ಮಹಿಳೆ ಸಂಗೀತಾ ಎಂಬುವರು, ಗಂಗರಾಜು ಎಂಬ ವ್ಯಕ್ತಿಯ ಎರಡನೇ ಪತ್ನಿಯಾಗಿದ್ದಾರೆ. ಕೆಲ ತಿಂಗಳ ಹಿಂದೆ ಬೆಂಗಳೂರಿನಲ್ಲಿ ಗಂಗರಾಜು ಸಂಗೀತಾಳನ್ನು ವಿವಾಹವಾದ ನಂತರ, ಅವರ ಮೊದಲ ಪತ್ನಿಯ ಸಂಬಂಧಿಕರು ಈ ಹಲ್ಲೆ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಸುದ್ದಿಯ ಪ್ರಕಾರ, ದುಷ್ಕರ್ಮಿಗಳು ಸಂಗೀತಾಳನ್ನು ಅಪಹರಿಸಿ, ತೋಟದ ಮನೆಯಲ್ಲಿ ಕಟ್ಟಿ ಹಾಕಿ ರಾತ್ರಿ ಪೂರ್ತಿ ಮಾನಸಿಕ ಹಾಗೂ ಶಾರೀರಿಕ ಪೀಡನೆಗೊಳಪಡಿಸಿದ್ದಾರೆ. ಬ್ಯಾಟ್, ರೈಲು ರಾಡ್ ಮುಂತಾದ ತೀವ್ರ ಆಯುಧಗಳಿಂದ ಹಲ್ಲೆ ನಡೆಸಿದ ಪರಿಣಾಮ, ಸಂಗೀತಾಳ ಮುಖದಲ್ಲಿ ಗಂಭೀರ ಗಾಯಗಳಾಗಿದ್ದು, ಕಣ್ಣಿನ ಜೋಡಿಗೆ ಹಾನಿಯಾಗಿರುವುದು ತಿಳಿದುಬಂದಿದೆ.

ಕುಟುಂಬ ಕಲಹವೇ ಕಾರಣ?

ಸಂಗೀತಾಳ ಸಹೋದರಿಯು ನೀಡಿದ ಮಾಹಿತಿಯ ಪ್ರಕಾರ, ಈ ಹಲ್ಲೆ ಹಿಂದಿನ ಮೂಲ ಕಾರಣ ಕುಟುಂಬ ಕಲಹವಾಗಿದೆ. ಗಂಗರಾಜು ಮತ್ತು ಸಂಗೀತಾ ಮದುವೆಯಾಗಿರುವ ವಿಚಾರಕ್ಕೆ ಮೊದಲ ಪತ್ನಿಯ ಪರಿವಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ವಿರೋಧವೇ ದಾಳಿಯ ಮೂಲ ಕಾರಣವಾಗಿರುವ ಸಾಧ್ಯತೆ ಇದೆ.

ನಿನ್ನೆ ರಾತ್ರಿ ಸಂಗೀತಾ ಅವರ ತಂದೆ ಮತ್ತು ಸಹೋದರಿಯರ ಜೊತೆಗೆ ಮಾತಾನಾಡಲು ಬಂದಿದ್ದರು. ಈ ಸಂದರ್ಭದಲ್ಲಿ ಗಲಾಟೆ ಏರ್ಪಟ್ಟಿದ್ದು, ಅದೇ ರಾತ್ರಿ ದುಷ್ಕರ್ಮಿಗಳು ಸಂಗೀತಾಳನ್ನು ಅಪಹರಿಸಿ ಕ್ರೂರ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ಸಂಗೀತಾಳ ಸಹೋದರಿ ಹಂಸ ಕೂಡ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಪೊಲೀಸರು ತನಿಖೆ ಆರಂಭಿಸಿದ್ದಾರೆ

ಘಟನೆಯ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಈ ಭೀಕರ ದಾಳಿಯು ಜಿಲ್ಲೆಯಲ್ಲೇ  ವಸ್ತವಿರುವಂತಹ ಭಯಾನಕ ಘಟನೆಯಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago