ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಜಗನಹಳ್ಳಿಯಲ್ಲಿ ಒಂದು ಭೀಕರ ಘಟನೆ ನಡೆದಿದೆ, ದುಷ್ಕರ್ಮಿಗಳು ಯುವತಿಯನ್ನು ಕಿಡ್ನಾಪ್ ಮಾಡಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಮಹಿಳೆಯನ್ನು ತೋಟದ ಮನೆಯಲ್ಲಿ ಬಂದು ಬರ್ಬರವಾಗಿ ಹಲ್ಲೆ ನಡೆಸಿ, ಕಣ್ಣಿಗೆ ಗಂಭೀರ ಗಾಯ ಮಾಡುವಂತಹ ಕ್ರೂರ ಕೃತ್ಯವೆಸಗಿದ್ದಾರೆ.
ಕಿಡ್ನಾಪ್ ಮಾಡಿ ಕ್ರೂರ ಹಿಂಸೆ!
ಸ್ಥಳೀಯ ಮಾಹಿತಿಯ ಪ್ರಕಾರ, ದಾಳಿಗೀಡಾದ ಮಹಿಳೆ ಸಂಗೀತಾ ಎಂಬುವರು, ಗಂಗರಾಜು ಎಂಬ ವ್ಯಕ್ತಿಯ ಎರಡನೇ ಪತ್ನಿಯಾಗಿದ್ದಾರೆ. ಕೆಲ ತಿಂಗಳ ಹಿಂದೆ ಬೆಂಗಳೂರಿನಲ್ಲಿ ಗಂಗರಾಜು ಸಂಗೀತಾಳನ್ನು ವಿವಾಹವಾದ ನಂತರ, ಅವರ ಮೊದಲ ಪತ್ನಿಯ ಸಂಬಂಧಿಕರು ಈ ಹಲ್ಲೆ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಸುದ್ದಿಯ ಪ್ರಕಾರ, ದುಷ್ಕರ್ಮಿಗಳು ಸಂಗೀತಾಳನ್ನು ಅಪಹರಿಸಿ, ತೋಟದ ಮನೆಯಲ್ಲಿ ಕಟ್ಟಿ ಹಾಕಿ ರಾತ್ರಿ ಪೂರ್ತಿ ಮಾನಸಿಕ ಹಾಗೂ ಶಾರೀರಿಕ ಪೀಡನೆಗೊಳಪಡಿಸಿದ್ದಾರೆ. ಬ್ಯಾಟ್, ರೈಲು ರಾಡ್ ಮುಂತಾದ ತೀವ್ರ ಆಯುಧಗಳಿಂದ ಹಲ್ಲೆ ನಡೆಸಿದ ಪರಿಣಾಮ, ಸಂಗೀತಾಳ ಮುಖದಲ್ಲಿ ಗಂಭೀರ ಗಾಯಗಳಾಗಿದ್ದು, ಕಣ್ಣಿನ ಜೋಡಿಗೆ ಹಾನಿಯಾಗಿರುವುದು ತಿಳಿದುಬಂದಿದೆ.
ಕುಟುಂಬ ಕಲಹವೇ ಕಾರಣ?
ಸಂಗೀತಾಳ ಸಹೋದರಿಯು ನೀಡಿದ ಮಾಹಿತಿಯ ಪ್ರಕಾರ, ಈ ಹಲ್ಲೆ ಹಿಂದಿನ ಮೂಲ ಕಾರಣ ಕುಟುಂಬ ಕಲಹವಾಗಿದೆ. ಗಂಗರಾಜು ಮತ್ತು ಸಂಗೀತಾ ಮದುವೆಯಾಗಿರುವ ವಿಚಾರಕ್ಕೆ ಮೊದಲ ಪತ್ನಿಯ ಪರಿವಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ವಿರೋಧವೇ ದಾಳಿಯ ಮೂಲ ಕಾರಣವಾಗಿರುವ ಸಾಧ್ಯತೆ ಇದೆ.
ನಿನ್ನೆ ರಾತ್ರಿ ಸಂಗೀತಾ ಅವರ ತಂದೆ ಮತ್ತು ಸಹೋದರಿಯರ ಜೊತೆಗೆ ಮಾತಾನಾಡಲು ಬಂದಿದ್ದರು. ಈ ಸಂದರ್ಭದಲ್ಲಿ ಗಲಾಟೆ ಏರ್ಪಟ್ಟಿದ್ದು, ಅದೇ ರಾತ್ರಿ ದುಷ್ಕರ್ಮಿಗಳು ಸಂಗೀತಾಳನ್ನು ಅಪಹರಿಸಿ ಕ್ರೂರ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ಸಂಗೀತಾಳ ಸಹೋದರಿ ಹಂಸ ಕೂಡ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಪೊಲೀಸರು ತನಿಖೆ ಆರಂಭಿಸಿದ್ದಾರೆ
ಘಟನೆಯ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಈ ಭೀಕರ ದಾಳಿಯು ಜಿಲ್ಲೆಯಲ್ಲೇ ವಸ್ತವಿರುವಂತಹ ಭಯಾನಕ ಘಟನೆಯಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…