Latest

ಮಹಿಳೆಯ ಮೇಲೆ ಭೀಕರ ದಾಳಿ: ಕಣ್ಣು ಗುಡ್ಡೆ ಕಿತ್ತು ಕ್ರೂರ ಹಲ್ಲೆ!

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಜಗನಹಳ್ಳಿಯಲ್ಲಿ ಒಂದು ಭೀಕರ ಘಟನೆ ನಡೆದಿದೆ,  ದುಷ್ಕರ್ಮಿಗಳು ಯುವತಿಯನ್ನು ಕಿಡ್ನಾಪ್ ಮಾಡಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಮಹಿಳೆಯನ್ನು ತೋಟದ ಮನೆಯಲ್ಲಿ ಬಂದು ಬರ್ಬರವಾಗಿ ಹಲ್ಲೆ ನಡೆಸಿ, ಕಣ್ಣಿಗೆ ಗಂಭೀರ ಗಾಯ ಮಾಡುವಂತಹ ಕ್ರೂರ ಕೃತ್ಯವೆಸಗಿದ್ದಾರೆ.

ಕಿಡ್ನಾಪ್ ಮಾಡಿ ಕ್ರೂರ ಹಿಂಸೆ!

ಸ್ಥಳೀಯ ಮಾಹಿತಿಯ ಪ್ರಕಾರ, ದಾಳಿಗೀಡಾದ ಮಹಿಳೆ ಸಂಗೀತಾ ಎಂಬುವರು, ಗಂಗರಾಜು ಎಂಬ ವ್ಯಕ್ತಿಯ ಎರಡನೇ ಪತ್ನಿಯಾಗಿದ್ದಾರೆ. ಕೆಲ ತಿಂಗಳ ಹಿಂದೆ ಬೆಂಗಳೂರಿನಲ್ಲಿ ಗಂಗರಾಜು ಸಂಗೀತಾಳನ್ನು ವಿವಾಹವಾದ ನಂತರ, ಅವರ ಮೊದಲ ಪತ್ನಿಯ ಸಂಬಂಧಿಕರು ಈ ಹಲ್ಲೆ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಸುದ್ದಿಯ ಪ್ರಕಾರ, ದುಷ್ಕರ್ಮಿಗಳು ಸಂಗೀತಾಳನ್ನು ಅಪಹರಿಸಿ, ತೋಟದ ಮನೆಯಲ್ಲಿ ಕಟ್ಟಿ ಹಾಕಿ ರಾತ್ರಿ ಪೂರ್ತಿ ಮಾನಸಿಕ ಹಾಗೂ ಶಾರೀರಿಕ ಪೀಡನೆಗೊಳಪಡಿಸಿದ್ದಾರೆ. ಬ್ಯಾಟ್, ರೈಲು ರಾಡ್ ಮುಂತಾದ ತೀವ್ರ ಆಯುಧಗಳಿಂದ ಹಲ್ಲೆ ನಡೆಸಿದ ಪರಿಣಾಮ, ಸಂಗೀತಾಳ ಮುಖದಲ್ಲಿ ಗಂಭೀರ ಗಾಯಗಳಾಗಿದ್ದು, ಕಣ್ಣಿನ ಜೋಡಿಗೆ ಹಾನಿಯಾಗಿರುವುದು ತಿಳಿದುಬಂದಿದೆ.

ಕುಟುಂಬ ಕಲಹವೇ ಕಾರಣ?

ಸಂಗೀತಾಳ ಸಹೋದರಿಯು ನೀಡಿದ ಮಾಹಿತಿಯ ಪ್ರಕಾರ, ಈ ಹಲ್ಲೆ ಹಿಂದಿನ ಮೂಲ ಕಾರಣ ಕುಟುಂಬ ಕಲಹವಾಗಿದೆ. ಗಂಗರಾಜು ಮತ್ತು ಸಂಗೀತಾ ಮದುವೆಯಾಗಿರುವ ವಿಚಾರಕ್ಕೆ ಮೊದಲ ಪತ್ನಿಯ ಪರಿವಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ವಿರೋಧವೇ ದಾಳಿಯ ಮೂಲ ಕಾರಣವಾಗಿರುವ ಸಾಧ್ಯತೆ ಇದೆ.

ನಿನ್ನೆ ರಾತ್ರಿ ಸಂಗೀತಾ ಅವರ ತಂದೆ ಮತ್ತು ಸಹೋದರಿಯರ ಜೊತೆಗೆ ಮಾತಾನಾಡಲು ಬಂದಿದ್ದರು. ಈ ಸಂದರ್ಭದಲ್ಲಿ ಗಲಾಟೆ ಏರ್ಪಟ್ಟಿದ್ದು, ಅದೇ ರಾತ್ರಿ ದುಷ್ಕರ್ಮಿಗಳು ಸಂಗೀತಾಳನ್ನು ಅಪಹರಿಸಿ ಕ್ರೂರ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ಸಂಗೀತಾಳ ಸಹೋದರಿ ಹಂಸ ಕೂಡ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಪೊಲೀಸರು ತನಿಖೆ ಆರಂಭಿಸಿದ್ದಾರೆ

ಘಟನೆಯ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಈ ಭೀಕರ ದಾಳಿಯು ಜಿಲ್ಲೆಯಲ್ಲೇ  ವಸ್ತವಿರುವಂತಹ ಭಯಾನಕ ಘಟನೆಯಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

20 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

20 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

20 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

20 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago