Latest

ಮಹಿಳೆಯ ಮೇಲೆ ಭೀಕರ ದಾಳಿ: ಕಣ್ಣು ಗುಡ್ಡೆ ಕಿತ್ತು ಕ್ರೂರ ಹಲ್ಲೆ!

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಜಗನಹಳ್ಳಿಯಲ್ಲಿ ಒಂದು ಭೀಕರ ಘಟನೆ ನಡೆದಿದೆ,  ದುಷ್ಕರ್ಮಿಗಳು ಯುವತಿಯನ್ನು ಕಿಡ್ನಾಪ್ ಮಾಡಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಮಹಿಳೆಯನ್ನು ತೋಟದ ಮನೆಯಲ್ಲಿ ಬಂದು ಬರ್ಬರವಾಗಿ ಹಲ್ಲೆ ನಡೆಸಿ, ಕಣ್ಣಿಗೆ ಗಂಭೀರ ಗಾಯ ಮಾಡುವಂತಹ ಕ್ರೂರ ಕೃತ್ಯವೆಸಗಿದ್ದಾರೆ.

ಕಿಡ್ನಾಪ್ ಮಾಡಿ ಕ್ರೂರ ಹಿಂಸೆ!

ಸ್ಥಳೀಯ ಮಾಹಿತಿಯ ಪ್ರಕಾರ, ದಾಳಿಗೀಡಾದ ಮಹಿಳೆ ಸಂಗೀತಾ ಎಂಬುವರು, ಗಂಗರಾಜು ಎಂಬ ವ್ಯಕ್ತಿಯ ಎರಡನೇ ಪತ್ನಿಯಾಗಿದ್ದಾರೆ. ಕೆಲ ತಿಂಗಳ ಹಿಂದೆ ಬೆಂಗಳೂರಿನಲ್ಲಿ ಗಂಗರಾಜು ಸಂಗೀತಾಳನ್ನು ವಿವಾಹವಾದ ನಂತರ, ಅವರ ಮೊದಲ ಪತ್ನಿಯ ಸಂಬಂಧಿಕರು ಈ ಹಲ್ಲೆ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಸುದ್ದಿಯ ಪ್ರಕಾರ, ದುಷ್ಕರ್ಮಿಗಳು ಸಂಗೀತಾಳನ್ನು ಅಪಹರಿಸಿ, ತೋಟದ ಮನೆಯಲ್ಲಿ ಕಟ್ಟಿ ಹಾಕಿ ರಾತ್ರಿ ಪೂರ್ತಿ ಮಾನಸಿಕ ಹಾಗೂ ಶಾರೀರಿಕ ಪೀಡನೆಗೊಳಪಡಿಸಿದ್ದಾರೆ. ಬ್ಯಾಟ್, ರೈಲು ರಾಡ್ ಮುಂತಾದ ತೀವ್ರ ಆಯುಧಗಳಿಂದ ಹಲ್ಲೆ ನಡೆಸಿದ ಪರಿಣಾಮ, ಸಂಗೀತಾಳ ಮುಖದಲ್ಲಿ ಗಂಭೀರ ಗಾಯಗಳಾಗಿದ್ದು, ಕಣ್ಣಿನ ಜೋಡಿಗೆ ಹಾನಿಯಾಗಿರುವುದು ತಿಳಿದುಬಂದಿದೆ.

ಕುಟುಂಬ ಕಲಹವೇ ಕಾರಣ?

ಸಂಗೀತಾಳ ಸಹೋದರಿಯು ನೀಡಿದ ಮಾಹಿತಿಯ ಪ್ರಕಾರ, ಈ ಹಲ್ಲೆ ಹಿಂದಿನ ಮೂಲ ಕಾರಣ ಕುಟುಂಬ ಕಲಹವಾಗಿದೆ. ಗಂಗರಾಜು ಮತ್ತು ಸಂಗೀತಾ ಮದುವೆಯಾಗಿರುವ ವಿಚಾರಕ್ಕೆ ಮೊದಲ ಪತ್ನಿಯ ಪರಿವಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ವಿರೋಧವೇ ದಾಳಿಯ ಮೂಲ ಕಾರಣವಾಗಿರುವ ಸಾಧ್ಯತೆ ಇದೆ.

ನಿನ್ನೆ ರಾತ್ರಿ ಸಂಗೀತಾ ಅವರ ತಂದೆ ಮತ್ತು ಸಹೋದರಿಯರ ಜೊತೆಗೆ ಮಾತಾನಾಡಲು ಬಂದಿದ್ದರು. ಈ ಸಂದರ್ಭದಲ್ಲಿ ಗಲಾಟೆ ಏರ್ಪಟ್ಟಿದ್ದು, ಅದೇ ರಾತ್ರಿ ದುಷ್ಕರ್ಮಿಗಳು ಸಂಗೀತಾಳನ್ನು ಅಪಹರಿಸಿ ಕ್ರೂರ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ಸಂಗೀತಾಳ ಸಹೋದರಿ ಹಂಸ ಕೂಡ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಪೊಲೀಸರು ತನಿಖೆ ಆರಂಭಿಸಿದ್ದಾರೆ

ಘಟನೆಯ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಈ ಭೀಕರ ದಾಳಿಯು ಜಿಲ್ಲೆಯಲ್ಲೇ  ವಸ್ತವಿರುವಂತಹ ಭಯಾನಕ ಘಟನೆಯಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

27 minutes ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

29 minutes ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

11 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

11 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

11 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

11 hours ago