ವೈದ್ಯಕೀಯ ಕ್ಷೇತ್ರವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಅತಿಯಾದ ಆತ್ಮವಿಶ್ವಾಸದಿಂದ ಏಳು ತಿಂಗಳ ಗರ್ಭಿಣಿಯ ಶಿಶು ದಾರುಣವಾಗಿ ಮೃತಪಟ್ಟಿದ್ದು, ಮಗುವಿನ ತಲೆ ತಾಯಿಯ ಗರ್ಭದಲ್ಲೇ ಉಳಿದ ಭೀಕರ ಘಟನೆ ಬೆಳಕಿಗೆ ಬಂದಿದೆ.
ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆ ತಲುಪಲು ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ನೋವು ತೀವ್ರಗೊಂಡಿದೆ.
ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್ನಲ್ಲಿದ್ದ ಆಶಾ ಕಾರ್ಯಕರ್ತೆ, ವೈದ್ಯರನ್ನು ಕಾಯದೇ ತಾನೇ ಹೆರಿಗೆ ಮಾಡಿಸಲು ಮುಂದಾಗಿದ್ದಾಳೆ. ಮಹಿಳೆಗೆ ನೋವು ನಿವಾರಕ ಇಂಜೆಕ್ಷನ್ ನೀಡಿ, ಬಲವಂತವಾಗಿ ಸಾಮಾನ್ಯ ಹೆರಿಗೆ ನಡೆಸಲು ಪ್ರಯತ್ನಿಸಿದ್ದಾಳೆ. ಆದರೆ ಹೆರಿಗೆ ವೇಳೆ ಮಗುವಿನ ದೇಹ ಹೊರಬಂದರೂ, ತಲೆ ಗರ್ಭದೊಳಗೆ ಸಿಲುಕಿಕೊಂಡಿದೆ. ಬಲವಂತವಾಗಿ ಎಳೆಯುವ ಪ್ರಯತ್ನದಲ್ಲಿ ಮಗುವಿನ ದೇಹ ಮತ್ತು ತಲೆ ಬೇರ್ಪಟ್ಟು, ದೇಹ ಮಾತ್ರ ಹೊರಬಂದ ದಾರುಣ ಪರಿಸ್ಥಿತಿ ಉಂಟಾಗಿದೆ.
ತಮ್ಮ ತಪ್ಪಿನಿಂದ ಮಗು ಮೃತಪಟ್ಟಿರುವುದನ್ನು ಕಂಡ ಸಿಬ್ಬಂದಿ, ಸತ್ಯವನ್ನು ಮರೆಮಾಚಲು ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಂತರ ಅವರನ್ನು ಜಿಲ್ಲಾ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು.
ಜಿಲ್ಲಾಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಪರೀಕ್ಷೆ ನಡೆಸಿದ ವೈದ್ಯರು ತಾಯಿಯ ಗರ್ಭದೊಳಗೆ ಮಗುವಿನ ತಲೆ ಉಳಿದಿರುವುದನ್ನು ಕಂಡು ಬೆಚ್ಚಿಬಿದ್ದರು. ತಕ್ಷಣವೇ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ತಲೆಯನ್ನು ಹೊರತೆಗೆದಿದ್ದಾರೆ. ಸದ್ಯ ತಾಯಿ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತೆ ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್ನೂ ಕಠಿಣ ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…