ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯವು, ಉಗ್ರಗಾಮಿಗಳೊಂದಿಗೆ ಸಂಪರ್ಕ ಹೊಂದಿದ್ದನೆಂಬ ಶಂಕೆ ಎದುರಿಸುತ್ತಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಮೌಸಿನ್ ಶುಕುರ್ ಅನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ನಂತರ, ಮೌಸಿನ್ ನನ್ನು ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಲು ಪೊಲೀಸರು ಸಜ್ಜುಗೊಂಡಿದ್ದಾರೆ.
ಈತನ ವಿರುದ್ಧ ಈಗಾಗಲೇ ಒಂದರ ಕುರಿತು ನ್ಯಾಯಾಂಗ ಬಂಧನ ನೀಡಲಾಗಿದೆ. ಇದಲ್ಲದೇ, ಮೌಸಿನ್ ವಿರುದ್ಧ ಉತ್ತರ ಕನ್ನಡ, ಬೆಂಗಳೂರು ಹಾಗೂ ಮಂಗಳೂರು ಭಾಗಗಳಲ್ಲಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ಇವುಗಳ ವಿಚಾರಣೆಗಾಗಿ ಬಾಡಿ ವಾರಂಟ್ ಆಧಾರದಲ್ಲಿ ಆತನನ್ನು ಮತ್ತೆ ಕಸ್ಟಡಿಗೆ ಪಡೆಯಲು ಪೊಲೀಸರು ಕ್ರಮ ಆರಂಭಿಸಿದ್ದಾರೆ.
ಮೌಸಿನ್ ಕೇವಲ ಗಂಭೀರ ಅಪರಾಧಗಳಲ್ಲಿ ಮಾತ್ರ ತೊಡಗಿಸಿಕೊಳ್ಳದೆ, ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಮಹತ್ವದ ಮಾಹಿತಿ ಕೂಡ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮೌಸಿನ್ ಮೇಲೆ ಹೆಚ್ಚಿನ ವಿಚಾರಣೆ ನಡೆಸಲು ತಯಾರಾಗಿದ್ದು, ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ಸಿಕ್ಕಿದೆ.
ಅಷ್ಟೇ ಅಲ್ಲದೆ, ಮೌಸಿನ್ ಶೃಂಗದಜಾಲದ ತನಿಖೆಯಲ್ಲಿ, ಆತನ ತಾಯಿ ಮತ್ತು ಸಹೋದರರನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…