ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯವು, ಉಗ್ರಗಾಮಿಗಳೊಂದಿಗೆ ಸಂಪರ್ಕ ಹೊಂದಿದ್ದನೆಂಬ ಶಂಕೆ ಎದುರಿಸುತ್ತಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಮೌಸಿನ್ ಶುಕುರ್ ಅನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ನಂತರ, ಮೌಸಿನ್ ನನ್ನು ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಲು ಪೊಲೀಸರು ಸಜ್ಜುಗೊಂಡಿದ್ದಾರೆ.
ಈತನ ವಿರುದ್ಧ ಈಗಾಗಲೇ ಒಂದರ ಕುರಿತು ನ್ಯಾಯಾಂಗ ಬಂಧನ ನೀಡಲಾಗಿದೆ. ಇದಲ್ಲದೇ, ಮೌಸಿನ್ ವಿರುದ್ಧ ಉತ್ತರ ಕನ್ನಡ, ಬೆಂಗಳೂರು ಹಾಗೂ ಮಂಗಳೂರು ಭಾಗಗಳಲ್ಲಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ಇವುಗಳ ವಿಚಾರಣೆಗಾಗಿ ಬಾಡಿ ವಾರಂಟ್ ಆಧಾರದಲ್ಲಿ ಆತನನ್ನು ಮತ್ತೆ ಕಸ್ಟಡಿಗೆ ಪಡೆಯಲು ಪೊಲೀಸರು ಕ್ರಮ ಆರಂಭಿಸಿದ್ದಾರೆ.
ಮೌಸಿನ್ ಕೇವಲ ಗಂಭೀರ ಅಪರಾಧಗಳಲ್ಲಿ ಮಾತ್ರ ತೊಡಗಿಸಿಕೊಳ್ಳದೆ, ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಮಹತ್ವದ ಮಾಹಿತಿ ಕೂಡ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮೌಸಿನ್ ಮೇಲೆ ಹೆಚ್ಚಿನ ವಿಚಾರಣೆ ನಡೆಸಲು ತಯಾರಾಗಿದ್ದು, ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ಸಿಕ್ಕಿದೆ.
ಅಷ್ಟೇ ಅಲ್ಲದೆ, ಮೌಸಿನ್ ಶೃಂಗದಜಾಲದ ತನಿಖೆಯಲ್ಲಿ, ಆತನ ತಾಯಿ ಮತ್ತು ಸಹೋದರರನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…