Latest

ನವೆಂಬರ್ 6ರಂದು ಟಿ.ಇ.ಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿ

ಕಲಬುರಗಿ – ಪ್ರಸಕ್ತ 2022 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿ.ಇ.ಟಿ) ನವೆಂಬರ್ 6 ರಂದು ರವಿವಾರ ಕಲಬುರಗಿ ನಗರದ 62 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶದ ಸುತ್ತಮತ್ತಲೂ (ಕಲಂ 144ರನ್ವಯ) ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸಕ್ರೆಪ್ಪಗೌಡ ಬಿರಾದಾರ ಅವರು ತಿಳಿಸಿದ್ದಾರೆ.
ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ ಧರಿಸಿ ಬರುವುದನ್ನು ನಿಷೇಧಿಸಲಾಗಿದ್ದು, ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ ಅಥವಾ ಸಹಿ ಮತ್ತು ಭಾವಚಿತ್ರ ವ್ಯತ್ಯಾಸ ಕಂಡುಬಂದ ಅಭ್ಯರ್ಥಿಗಳು ತಮ್ಮೊಂದಿಗೆ ಆನ್‍ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ ಕಾರ್ಡ್ ಅಥವಾ ಮತ್ತಿತರ ಅಧಿಕೃತ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ಕಡ್ಡಾಯವಾಗಿ ತೋರಿಸಬೇಕು. ಎಲೆಕ್ಟ್ರಾನಿಕ್ಸ ಯಾವುದೇ ಯಂತ್ರಗಳನ್ನು ಪರೀಕ್ಷಾ ಕೇಂದ್ರದಲ್ಲಿ ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಪರೀಕ್ಷೆಗೆ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಅಧಿವೇಶನ-1 ಪತ್ರಿಕೆ ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 46 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅಧಿವೇಶನ-2 ಪತ್ರಿಕೆ ಅಂದು ಮಧ್ಯಾಹ್ನ 2 ರಿಂದ ಸಾಯಂಕಾಲ 4.30 ಗಂಟೆಯವರೆಗೆ 62 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 16,984 ಜನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 62 ಪರೀಕ್ಷಾ ಕೇಂದ್ರಗಳಿಗೆ 18 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಈ ಕೆಳಕಂಡ ಪರೀಕ್ಷಾ ಕೇಂದ್ರಗಳ ವಿಳಾಸ ಕುರಿತು ಡಿ.ಡಿ.ಪಿ.ಐ. ಇವರಿಂದ ಸ್ಪಷ್ಟೀಕರಣ: ಪರೀಕ್ಷಾ ಕೇಂದ್ರ ಸಂಖ್ಯೆ 34ರ ಸರಿಯಾದ ವಿಳಾಸ ಸರ್ವಜ್ಞ ಪ್ರೌಢಶಾಲೆ ಸಾಯಿ ಮಂದಿರ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 47ರ ಸಂಗಮ ಪ್ರೌಢಶಾಲೆಯ ಸರಿಯಾದ ವಿಳಾಸ ಸಂಗಮ ಪ್ರೌಢಶಾಲೆ ಮಹಾಲಕ್ಷ್ಮೀ ಲೇಔಟ್ ಹುಮನಾಬಾದ ರಿಂಗ್ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 49ರ ಸರಿಯಾದ ವಿಳಾಸ ನ್ಯಾಷನಲ್ ಉರ್ದು ಬಾಲಕರ ಪ್ರೌಢ ಶಾಲೆ ಹಫ್ತ ಗುಂಬಜ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 50ರ ಸರಿಯಾದ ವಿಳಾಸ ನ್ಯಾಷನಲ್ ಪದವಿ ಪೂರ್ವ ಕಾಲೇಜು ಹಫ್ತ ಗುಂಬಜ ಕಲಬುರಗಿ ಹಾಗೂ ಪರೀಕ್ಷಾ ಕೇಂದ್ರ ಸಂಖ್ಯೆ 62ರ ಸರಿಯಾದ ವಿಳಾಸ ನ್ಯೂಟನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಟೇಲ್ ಕಾಲೋನಿ ಎಂ.ಎಸ್.ಕೆ.ಮಿಲ್. ರಸ್ತೆ ಜಾಫರಾಬಾದ ಕಲಬುರಗಿ.
ವರದಿ ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago