Latest

ನವೆಂಬರ್ 6ರಂದು ಟಿ.ಇ.ಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿ

ಕಲಬುರಗಿ – ಪ್ರಸಕ್ತ 2022 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿ.ಇ.ಟಿ) ನವೆಂಬರ್ 6 ರಂದು ರವಿವಾರ ಕಲಬುರಗಿ ನಗರದ 62 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶದ ಸುತ್ತಮತ್ತಲೂ (ಕಲಂ 144ರನ್ವಯ) ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸಕ್ರೆಪ್ಪಗೌಡ ಬಿರಾದಾರ ಅವರು ತಿಳಿಸಿದ್ದಾರೆ.
ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ ಧರಿಸಿ ಬರುವುದನ್ನು ನಿಷೇಧಿಸಲಾಗಿದ್ದು, ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ ಅಥವಾ ಸಹಿ ಮತ್ತು ಭಾವಚಿತ್ರ ವ್ಯತ್ಯಾಸ ಕಂಡುಬಂದ ಅಭ್ಯರ್ಥಿಗಳು ತಮ್ಮೊಂದಿಗೆ ಆನ್‍ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ ಕಾರ್ಡ್ ಅಥವಾ ಮತ್ತಿತರ ಅಧಿಕೃತ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ಕಡ್ಡಾಯವಾಗಿ ತೋರಿಸಬೇಕು. ಎಲೆಕ್ಟ್ರಾನಿಕ್ಸ ಯಾವುದೇ ಯಂತ್ರಗಳನ್ನು ಪರೀಕ್ಷಾ ಕೇಂದ್ರದಲ್ಲಿ ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಪರೀಕ್ಷೆಗೆ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಅಧಿವೇಶನ-1 ಪತ್ರಿಕೆ ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 46 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅಧಿವೇಶನ-2 ಪತ್ರಿಕೆ ಅಂದು ಮಧ್ಯಾಹ್ನ 2 ರಿಂದ ಸಾಯಂಕಾಲ 4.30 ಗಂಟೆಯವರೆಗೆ 62 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 16,984 ಜನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 62 ಪರೀಕ್ಷಾ ಕೇಂದ್ರಗಳಿಗೆ 18 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಈ ಕೆಳಕಂಡ ಪರೀಕ್ಷಾ ಕೇಂದ್ರಗಳ ವಿಳಾಸ ಕುರಿತು ಡಿ.ಡಿ.ಪಿ.ಐ. ಇವರಿಂದ ಸ್ಪಷ್ಟೀಕರಣ: ಪರೀಕ್ಷಾ ಕೇಂದ್ರ ಸಂಖ್ಯೆ 34ರ ಸರಿಯಾದ ವಿಳಾಸ ಸರ್ವಜ್ಞ ಪ್ರೌಢಶಾಲೆ ಸಾಯಿ ಮಂದಿರ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 47ರ ಸಂಗಮ ಪ್ರೌಢಶಾಲೆಯ ಸರಿಯಾದ ವಿಳಾಸ ಸಂಗಮ ಪ್ರೌಢಶಾಲೆ ಮಹಾಲಕ್ಷ್ಮೀ ಲೇಔಟ್ ಹುಮನಾಬಾದ ರಿಂಗ್ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 49ರ ಸರಿಯಾದ ವಿಳಾಸ ನ್ಯಾಷನಲ್ ಉರ್ದು ಬಾಲಕರ ಪ್ರೌಢ ಶಾಲೆ ಹಫ್ತ ಗುಂಬಜ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 50ರ ಸರಿಯಾದ ವಿಳಾಸ ನ್ಯಾಷನಲ್ ಪದವಿ ಪೂರ್ವ ಕಾಲೇಜು ಹಫ್ತ ಗುಂಬಜ ಕಲಬುರಗಿ ಹಾಗೂ ಪರೀಕ್ಷಾ ಕೇಂದ್ರ ಸಂಖ್ಯೆ 62ರ ಸರಿಯಾದ ವಿಳಾಸ ನ್ಯೂಟನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಟೇಲ್ ಕಾಲೋನಿ ಎಂ.ಎಸ್.ಕೆ.ಮಿಲ್. ರಸ್ತೆ ಜಾಫರಾಬಾದ ಕಲಬುರಗಿ.
ವರದಿ ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago