Latest

ನವೆಂಬರ್ 6ರಂದು ಟಿ.ಇ.ಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿ

ಕಲಬುರಗಿ – ಪ್ರಸಕ್ತ 2022 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿ.ಇ.ಟಿ) ನವೆಂಬರ್ 6 ರಂದು ರವಿವಾರ ಕಲಬುರಗಿ ನಗರದ 62 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶದ ಸುತ್ತಮತ್ತಲೂ (ಕಲಂ 144ರನ್ವಯ) ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸಕ್ರೆಪ್ಪಗೌಡ ಬಿರಾದಾರ ಅವರು ತಿಳಿಸಿದ್ದಾರೆ.
ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ ಧರಿಸಿ ಬರುವುದನ್ನು ನಿಷೇಧಿಸಲಾಗಿದ್ದು, ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ ಅಥವಾ ಸಹಿ ಮತ್ತು ಭಾವಚಿತ್ರ ವ್ಯತ್ಯಾಸ ಕಂಡುಬಂದ ಅಭ್ಯರ್ಥಿಗಳು ತಮ್ಮೊಂದಿಗೆ ಆನ್‍ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ ಕಾರ್ಡ್ ಅಥವಾ ಮತ್ತಿತರ ಅಧಿಕೃತ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ಕಡ್ಡಾಯವಾಗಿ ತೋರಿಸಬೇಕು. ಎಲೆಕ್ಟ್ರಾನಿಕ್ಸ ಯಾವುದೇ ಯಂತ್ರಗಳನ್ನು ಪರೀಕ್ಷಾ ಕೇಂದ್ರದಲ್ಲಿ ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಪರೀಕ್ಷೆಗೆ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಅಧಿವೇಶನ-1 ಪತ್ರಿಕೆ ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 46 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅಧಿವೇಶನ-2 ಪತ್ರಿಕೆ ಅಂದು ಮಧ್ಯಾಹ್ನ 2 ರಿಂದ ಸಾಯಂಕಾಲ 4.30 ಗಂಟೆಯವರೆಗೆ 62 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 16,984 ಜನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 62 ಪರೀಕ್ಷಾ ಕೇಂದ್ರಗಳಿಗೆ 18 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಈ ಕೆಳಕಂಡ ಪರೀಕ್ಷಾ ಕೇಂದ್ರಗಳ ವಿಳಾಸ ಕುರಿತು ಡಿ.ಡಿ.ಪಿ.ಐ. ಇವರಿಂದ ಸ್ಪಷ್ಟೀಕರಣ: ಪರೀಕ್ಷಾ ಕೇಂದ್ರ ಸಂಖ್ಯೆ 34ರ ಸರಿಯಾದ ವಿಳಾಸ ಸರ್ವಜ್ಞ ಪ್ರೌಢಶಾಲೆ ಸಾಯಿ ಮಂದಿರ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 47ರ ಸಂಗಮ ಪ್ರೌಢಶಾಲೆಯ ಸರಿಯಾದ ವಿಳಾಸ ಸಂಗಮ ಪ್ರೌಢಶಾಲೆ ಮಹಾಲಕ್ಷ್ಮೀ ಲೇಔಟ್ ಹುಮನಾಬಾದ ರಿಂಗ್ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 49ರ ಸರಿಯಾದ ವಿಳಾಸ ನ್ಯಾಷನಲ್ ಉರ್ದು ಬಾಲಕರ ಪ್ರೌಢ ಶಾಲೆ ಹಫ್ತ ಗುಂಬಜ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 50ರ ಸರಿಯಾದ ವಿಳಾಸ ನ್ಯಾಷನಲ್ ಪದವಿ ಪೂರ್ವ ಕಾಲೇಜು ಹಫ್ತ ಗುಂಬಜ ಕಲಬುರಗಿ ಹಾಗೂ ಪರೀಕ್ಷಾ ಕೇಂದ್ರ ಸಂಖ್ಯೆ 62ರ ಸರಿಯಾದ ವಿಳಾಸ ನ್ಯೂಟನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಟೇಲ್ ಕಾಲೋನಿ ಎಂ.ಎಸ್.ಕೆ.ಮಿಲ್. ರಸ್ತೆ ಜಾಫರಾಬಾದ ಕಲಬುರಗಿ.
ವರದಿ ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

2 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

2 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

2 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

2 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

2 hours ago