Latest

“ಮೇಲಿನದಿನಮಘಟ್ಟನಹಳ್ಳಿ ಶಾಲೆ ಶಿಥಿಲಾವಸ್ಥೆಯಲ್ಲಿ: ಮಕ್ಕಳಿಗೆ ಶಿಕ್ಷಣಕ್ಕಿಂತ ಜೀವದ ಆತಂಕ ಹೆಚ್ಚು!”

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸಮೀಪದ ಮೇಲಿನದಿನಮಘಟ್ಟನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇಂದು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ. ಅಂದಾಜು 12 ಮಕ್ಕಳಿಗೆ ಪಾಠ ನೀಡುತ್ತಿರುವ ಈ ಶಾಲೆಯ ಹಳೆ ಕಟ್ಟಡ ಇನ್ನು ಕೆಲವೇ ದಿನಗಳಲ್ಲಿ ಸಂಪೂರ್ಣವಾಗಿ ಧರೆಗುರುಳುವ ಹಂತದಲ್ಲಿದೆ. ಮಳೆಗಾಲ ಆರಂಭವಾದಂತೇ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಶಾಲೆಯೊಂದರಲ್ಲಿ ಒಟ್ಟು ಎರಡು ಕಟ್ಟಡಗಳಿದ್ದು, ಒಂದರ ಸ್ಥಿತಿ ಚಿಂತೆಗೀಡಾಗಿದೆ. ಸಂಪೂರ್ಣವಾಗಿ ಶಿಥಿಲಗೊಂಡಿರುವ ಮೊದಲ ಕಟ್ಟಡ ಉಪಯೋಗಕ್ಕೆ ಅನರ್ಹವಾಗಿದ್ದು, ಎರಡನೆಯ ಕಟ್ಟಡದ ಗೋಡೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಮಳೆಯಾದಾಗ ನೀರು ಓದುತ್ತಿರುವ ಕೋಣೆಯೊಳಗೆ ಹರಿದುಬರುತ್ತದೆ. ಮೇಲ್ಚಾವಣಿಯ ಸಿಮೆಂಟ್ ಏಕಾಏಕಿ ಕುಸಿಯುವ ಹಂತದಲ್ಲಿದ್ದು, ಕಬ್ಬಿಣದ ದಾರಗಳು ಹೊರ ಬೀಳುತ್ತಿರುವ ದೃಶ್ಯಗಳು ಆತಂಕ ಹುಟ್ಟಿಸುತ್ತಿವೆ.

ವಿದ್ಯಾರ್ಥಿಗಳಿಗೆ ಪಾಠ ಕಲಿಸುವ ಕೊಠಡಿಯೇ ಅಡುಗೆ ಮನೆ ಆಗಿದ್ದು, ಪಾಠ ಹಾಗೂ ಮಧ್ಯಾಹ್ನ ಭೋಜನ ಇಬ್ಬರೂ ಒಂದೇ ಕೋಣೆಯಲ್ಲಿ ನಡೆಯುತ್ತಿದೆ. ಈ ಸ್ಥಿತಿಯಲ್ಲಿ ಮಕ್ಕಳು ದಿನಂಪ್ರತಿ ಭಯದ ವಾತಾವರಣದಲ್ಲಿ ಪಾಠ ಕೇಳುತ್ತಿದ್ದಾರೆ.

ಸ್ಥಳಾಂತರದ ಬೇಡಿಕೆ ಸ್ಥಳೀಯರು, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಶಿಕ್ಷಕರು ಅನೇಕ ಬಾರಿ ಅಧಿಕಾರಿಗಳ ಗಮನ ಸೆಳೆದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎನ್ನಲಾಗುತ್ತಿದೆ. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿದ್ದೇಶ್ ಮಾತನಾಡುತ್ತಾ, “ಈ ಕಟ್ಟಡ ಇನ್ನೇನು ಕುಸಿಯುವ ಹಂತದಲ್ಲಿದೆ. ಮಕ್ಕಳನ್ನು ತಕ್ಷಣವೇ ಬೇರೆ ಸ್ಥಳಕ್ಕೆ ಸ್ಥಳಾಂತರಿಸಿ ಹೊಸ ಕಟ್ಟಡ ನಿರ್ಮಿಸಬೇಕಿದೆ. ಗ್ರಾಮದಲ್ಲೇ ಇರುವ ಅಂಗನವಾಡಿ ಕಟ್ಟಡ ಪಕ್ಕದಲ್ಲಿ ಸರ್ಕಾರಿ ಭೂಮಿ ಇದೆ. ಅಲ್ಲಿ ಹೊಸ ಶಾಲಾ ಕಟ್ಟಡ ನಿರ್ಮಿಸಬೇಕೆಂಬುದೇ ನಮ್ಮ ಮನವಿ,” ಎಂದು ಹೇಳಿದ್ದಾರೆ.

ಗ್ರಾಮಸ್ಥರಾದ ಗೋಪಾಲ್ ಎಂಬವರು, “ಈ ವರ್ಷ ನನ್ನ ಮನೆಯನ್ನು ಶಾಲೆಗೆ ಬಿಟ್ಟು ನೀಡಿದ್ದೆ. ಮಕ್ಕಳ ಸುರಕ್ಷತೆ ನನಗೆ ಮುಖ್ಯ,” ಎಂದು ವಿಷಾದ ವ್ಯಕ್ತಪಡಿಸಿದರು.

ಮುಖ್ಯಶಿಕ್ಷಕಿಯ ಆತಂಕ ಶಾಲೆಯ ಮುಖ್ಯಶಿಕ್ಷಕಿ ಪದ್ಮಾವತಮ್ಮ ಮಾತಿನಲ್ಲಿ ಆತಂಕ ಸ್ಪಷ್ಟವಾಗಿ ತೋರಿಬಂದಿತು: “ಅಧಿಕಾರಿಗಳ ಗಮನಕ್ಕೆ ಈಗಾಗಲೇ ತಂದಿರುವರೂ, ಸಮಸ್ಯೆಗೆ ಶೀಘ್ರ ಪರಿಹಾರ ಬೇಕಾಗಿದೆ. ಮಕ್ಕಳ ಭವಿಷ್ಯ ಭದ್ರವಾಗಿರಬೇಕಾದರೆ, ಶಿಘ್ರದಲ್ಲೇ ಕ್ರಮ ಕೈಗೊಳ್ಳಬೇಕು,” ಎಂದರು.

ರಾಜಕೀಯ ನಿರ್ಲಕ್ಷ್ಯ? ಸ್ಥಳೀಯ ಶಾಸಕರು ಬೇರೆ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಕಾರಣ ಈ ವಿಷಯ ಕಡೆಗೆ ಅಗತ್ಯ ಗಮನ ನೀಡಲಾಗುತ್ತಿಲ್ಲ ಎನ್ನುವ ಆರೋಪ ಗ್ರಾಮಸ್ಥರಿಂದ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಖುದ್ದಾಗಿ ಈ ಶಿಥಿಲ ಶಾಲಾ ಕಟ್ಟಡದ ಪರಿಸ್ಥಿತಿಗೆ ಗಮನಹರಿಸಿ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳಬೇಕು.

ಮಕ್ಕಳ ಬಾಳು ಹಂಚಿಕೊಳ್ಳುವ ಮೊದಲು.. ಒಂದು ಬಾಗಿಲು, ಒಂದು ಕೋಣೆ, ಸೋರುವ ಚಾವಣಿ – ಈ ಎಲ್ಲಾ ಭೀತಿಯಿಂದ ದಿನವಿಡೀ ಶಿಕ್ಷಕರೂ, ಮಕ್ಕಳೂ ಅಕ್ಕಪಕ್ಕ ಉಳಿಯುತ್ತಿದ್ದಾರೆ. ಅವರ ಬಾಳಿಗೆ ಬೆನ್ನು ನಿಲ್ಲಿಸುವ ಶಿಕ್ಷಣ ಈ ರೀತಿ ಮುಂದುವರಿಯಬೇಕೆ? ಕೇವಲ ಅನಾಹುತವಾದ ನಂತರವೇ ಆಡಳಿತದ ಮನ್ನಣೆ ಸಿಗಬೇಕೆ?

ಈ ಭದ್ರತಾ ಬಿಕ್ಕಟ್ಟುಗೆ ತಕ್ಷಣ ಪರಿಹಾರ ನೀಡದಿದ್ದರೆ, ಅದು ಕೇವಲ ಶಾಲೆಯವಲ್ಲ, ಸರ್ವಜನಿಕ ವ್ಯವಸ್ಥೆಯ ವಿಫಲತೆಯ ನಿದರ್ಶನವಾಗಲಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago