ಆರೋಪಿತರಾದ ದರ್ಶನ್ ಅಶೋಕ್ ನಾಯ್ಕ ಗಣೇಶ್ ರವರುಗಳು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಹುಳಿಯಾರು ಪೊಲೀಸ್ ಠಾಣಾ ಮೊ,ನಂ 162/2022 ಕಾಲಂ 376, 506, ರೆ/ವಿ 34 ಐಪಿಸಿ ಜೊತೆಗೆ ಕಾಲ 04 ಮತ್ತು 06 ಪೋಕ್ಸೋ ಕಾಯ್ದೆ 2012 ರ ರೀತ್ಯ ಪ್ರಕರಣವನ್ನು ದಾಖಲು ಮಾಡಿದ್ದು, ಚಿಕ್ಕನಾಯಕನಹಳ್ಳಿ ವೃತ್ತದ ಅಂದಿನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ನಿರ್ಮಲ ವಿ, ರವರು ತನಿಖೆ ಕೈಗೊಂಡು ಪ್ರಕರಣದ ಆರೋಪಿತರಾದ ಅಶೋಕ್ ನಾಯ್ ಗಣೇಶ್ ಬಿನ್ ಧನಂಜಯ ನಾಯ್ 24 ವರ್ಷ ದೊಡ್ಡಬಿದರೆ ಹೊಸಹಟ್ಟಿ ತಾಂಡ್ಯ, ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ಹಾಗೂ ದರ್ಶನ್ ಬಿನ್ ಮಂಜುನಾಥ್ 26 ವರ್ಷ ವರದಾಪುರದ ಕಟ್ಟೆ ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ರವರುಗಳನ್ನು ದಸ್ತಗಿರಿ ಮಾಡಿ ತನಿಖೆಯನ್ನು ಸಂಪೂರ್ಣಗೊಳಿಸಿ ಆರೋಪಿತರುಗಳ ವಿರುದ್ಧ ಘನ ನಾಯಾಲಯಕ್ಕೆ ದೋಷಾರೂಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣವು ತುಮಕೂರು ಜಿಲ್ಲಾ FTSC-01 ಘನ ನ್ಯಾಯಾಲಯದಲ್ಲಿ ಸ್ಪೆಷಲ್ ಸಿಸಿ ನಂಬರ್ 782/2022 ರಲ್ಲಿ ವಿಚಾರಣೆ ನಡೆದು ಆರೋಪಿ-01 ಅಶೋಕ್ ನಾಯ್ ಗಣೇಶ್ ರವರ ಆರೋಪ
ಖುಲಾಸೆಗೊಂಡು ಆರೋಪಿ-02 ದರ್ಶನ್ ರವರ ವಿರುದ್ಧ ಆರೋಪ ಸಾಬೀತಾದ ಹಿನ್ನಲೆಯಲ್ಲಿ ದಿನಾಂಕ 22-05-2025 ರಂದು ಪ್ರಕರಣದ ಎ-2 ಆರೋಪಿ ದರ್ಶನ್ ರವರಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷದ 50 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿರುತ್ತೆ ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್ ರವರು ವಾದ ಮಂಡಿಸಿರುತ್ತಾರೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…