ಆರೋಪಿತರಾದ ದರ್ಶನ್ ಅಶೋಕ್ ನಾಯ್ಕ ಗಣೇಶ್ ರವರುಗಳು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಹುಳಿಯಾರು ಪೊಲೀಸ್ ಠಾಣಾ ಮೊ,ನಂ 162/2022 ಕಾಲಂ 376, 506, ರೆ/ವಿ 34 ಐಪಿಸಿ ಜೊತೆಗೆ ಕಾಲ 04 ಮತ್ತು 06 ಪೋಕ್ಸೋ ಕಾಯ್ದೆ 2012 ರ ರೀತ್ಯ ಪ್ರಕರಣವನ್ನು ದಾಖಲು ಮಾಡಿದ್ದು, ಚಿಕ್ಕನಾಯಕನಹಳ್ಳಿ ವೃತ್ತದ ಅಂದಿನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ನಿರ್ಮಲ ವಿ, ರವರು ತನಿಖೆ ಕೈಗೊಂಡು ಪ್ರಕರಣದ ಆರೋಪಿತರಾದ ಅಶೋಕ್ ನಾಯ್ ಗಣೇಶ್ ಬಿನ್ ಧನಂಜಯ ನಾಯ್ 24 ವರ್ಷ ದೊಡ್ಡಬಿದರೆ ಹೊಸಹಟ್ಟಿ ತಾಂಡ್ಯ, ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ಹಾಗೂ ದರ್ಶನ್ ಬಿನ್ ಮಂಜುನಾಥ್ 26 ವರ್ಷ ವರದಾಪುರದ ಕಟ್ಟೆ ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ರವರುಗಳನ್ನು ದಸ್ತಗಿರಿ ಮಾಡಿ ತನಿಖೆಯನ್ನು ಸಂಪೂರ್ಣಗೊಳಿಸಿ ಆರೋಪಿತರುಗಳ ವಿರುದ್ಧ ಘನ ನಾಯಾಲಯಕ್ಕೆ ದೋಷಾರೂಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣವು ತುಮಕೂರು ಜಿಲ್ಲಾ FTSC-01 ಘನ ನ್ಯಾಯಾಲಯದಲ್ಲಿ ಸ್ಪೆಷಲ್ ಸಿಸಿ ನಂಬರ್ 782/2022 ರಲ್ಲಿ ವಿಚಾರಣೆ ನಡೆದು ಆರೋಪಿ-01 ಅಶೋಕ್ ನಾಯ್ ಗಣೇಶ್ ರವರ ಆರೋಪ
ಖುಲಾಸೆಗೊಂಡು ಆರೋಪಿ-02 ದರ್ಶನ್ ರವರ ವಿರುದ್ಧ ಆರೋಪ ಸಾಬೀತಾದ ಹಿನ್ನಲೆಯಲ್ಲಿ ದಿನಾಂಕ 22-05-2025 ರಂದು ಪ್ರಕರಣದ ಎ-2 ಆರೋಪಿ ದರ್ಶನ್ ರವರಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷದ 50 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿರುತ್ತೆ ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್ ರವರು ವಾದ ಮಂಡಿಸಿರುತ್ತಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…