ಆರೋಪಿತರಾದ ದರ್ಶನ್ ಅಶೋಕ್ ನಾಯ್ಕ ಗಣೇಶ್ ರವರುಗಳು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಹುಳಿಯಾರು ಪೊಲೀಸ್ ಠಾಣಾ ಮೊ,ನಂ 162/2022 ಕಾಲಂ 376, 506, ರೆ/ವಿ 34 ಐಪಿಸಿ ಜೊತೆಗೆ ಕಾಲ 04 ಮತ್ತು 06 ಪೋಕ್ಸೋ ಕಾಯ್ದೆ 2012 ರ ರೀತ್ಯ ಪ್ರಕರಣವನ್ನು ದಾಖಲು ಮಾಡಿದ್ದು, ಚಿಕ್ಕನಾಯಕನಹಳ್ಳಿ ವೃತ್ತದ ಅಂದಿನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ನಿರ್ಮಲ ವಿ, ರವರು ತನಿಖೆ ಕೈಗೊಂಡು ಪ್ರಕರಣದ ಆರೋಪಿತರಾದ ಅಶೋಕ್ ನಾಯ್ ಗಣೇಶ್ ಬಿನ್ ಧನಂಜಯ ನಾಯ್ 24 ವರ್ಷ ದೊಡ್ಡಬಿದರೆ ಹೊಸಹಟ್ಟಿ ತಾಂಡ್ಯ, ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ಹಾಗೂ ದರ್ಶನ್ ಬಿನ್ ಮಂಜುನಾಥ್ 26 ವರ್ಷ ವರದಾಪುರದ ಕಟ್ಟೆ ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ರವರುಗಳನ್ನು ದಸ್ತಗಿರಿ ಮಾಡಿ ತನಿಖೆಯನ್ನು ಸಂಪೂರ್ಣಗೊಳಿಸಿ ಆರೋಪಿತರುಗಳ ವಿರುದ್ಧ ಘನ ನಾಯಾಲಯಕ್ಕೆ ದೋಷಾರೂಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣವು ತುಮಕೂರು ಜಿಲ್ಲಾ FTSC-01 ಘನ ನ್ಯಾಯಾಲಯದಲ್ಲಿ ಸ್ಪೆಷಲ್ ಸಿಸಿ ನಂಬರ್ 782/2022 ರಲ್ಲಿ ವಿಚಾರಣೆ ನಡೆದು ಆರೋಪಿ-01 ಅಶೋಕ್ ನಾಯ್ ಗಣೇಶ್ ರವರ ಆರೋಪ
ಖುಲಾಸೆಗೊಂಡು ಆರೋಪಿ-02 ದರ್ಶನ್ ರವರ ವಿರುದ್ಧ ಆರೋಪ ಸಾಬೀತಾದ ಹಿನ್ನಲೆಯಲ್ಲಿ ದಿನಾಂಕ 22-05-2025 ರಂದು ಪ್ರಕರಣದ ಎ-2 ಆರೋಪಿ ದರ್ಶನ್ ರವರಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷದ 50 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿರುತ್ತೆ ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್ ರವರು ವಾದ ಮಂಡಿಸಿರುತ್ತಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…