ಆರೋಪಿತರಾದ ದರ್ಶನ್ ಅಶೋಕ್ ನಾಯ್ಕ ಗಣೇಶ್ ರವರುಗಳು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಹುಳಿಯಾರು ಪೊಲೀಸ್ ಠಾಣಾ ಮೊ,ನಂ 162/2022 ಕಾಲಂ 376, 506, ರೆ/ವಿ 34 ಐಪಿಸಿ ಜೊತೆಗೆ ಕಾಲ 04 ಮತ್ತು 06 ಪೋಕ್ಸೋ ಕಾಯ್ದೆ 2012 ರ ರೀತ್ಯ ಪ್ರಕರಣವನ್ನು ದಾಖಲು ಮಾಡಿದ್ದು, ಚಿಕ್ಕನಾಯಕನಹಳ್ಳಿ ವೃತ್ತದ ಅಂದಿನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ನಿರ್ಮಲ ವಿ, ರವರು ತನಿಖೆ ಕೈಗೊಂಡು ಪ್ರಕರಣದ ಆರೋಪಿತರಾದ ಅಶೋಕ್ ನಾಯ್ ಗಣೇಶ್ ಬಿನ್ ಧನಂಜಯ ನಾಯ್ 24 ವರ್ಷ ದೊಡ್ಡಬಿದರೆ ಹೊಸಹಟ್ಟಿ ತಾಂಡ್ಯ, ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ಹಾಗೂ ದರ್ಶನ್ ಬಿನ್ ಮಂಜುನಾಥ್ 26 ವರ್ಷ ವರದಾಪುರದ ಕಟ್ಟೆ ಹುಳಿಯಾರು ಹೋಬಳಿ ಚಿಕ್ಕನಾಯಕನಹಳ್ಳಿ ತಾಲೂಕು, ರವರುಗಳನ್ನು ದಸ್ತಗಿರಿ ಮಾಡಿ ತನಿಖೆಯನ್ನು ಸಂಪೂರ್ಣಗೊಳಿಸಿ ಆರೋಪಿತರುಗಳ ವಿರುದ್ಧ ಘನ ನಾಯಾಲಯಕ್ಕೆ ದೋಷಾರೂಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣವು ತುಮಕೂರು ಜಿಲ್ಲಾ FTSC-01 ಘನ ನ್ಯಾಯಾಲಯದಲ್ಲಿ ಸ್ಪೆಷಲ್ ಸಿಸಿ ನಂಬರ್ 782/2022 ರಲ್ಲಿ ವಿಚಾರಣೆ ನಡೆದು ಆರೋಪಿ-01 ಅಶೋಕ್ ನಾಯ್ ಗಣೇಶ್ ರವರ ಆರೋಪ
ಖುಲಾಸೆಗೊಂಡು ಆರೋಪಿ-02 ದರ್ಶನ್ ರವರ ವಿರುದ್ಧ ಆರೋಪ ಸಾಬೀತಾದ ಹಿನ್ನಲೆಯಲ್ಲಿ ದಿನಾಂಕ 22-05-2025 ರಂದು ಪ್ರಕರಣದ ಎ-2 ಆರೋಪಿ ದರ್ಶನ್ ರವರಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷದ 50 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿರುತ್ತೆ ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್ ರವರು ವಾದ ಮಂಡಿಸಿರುತ್ತಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…