ಬೆಳಗಾವಿ: ತಾಯಿಯಿಲ್ಲದ ತಬ್ಬಲಿಯನ್ನ ಕಣ್ಣಲ್ಲಿ ಕಣ್ಣಿಟ್ಟು ಆರೈಕೆ ಮಾಡಬೇಕಿದ್ದ ಮಲತಾಯಿ ಮಗಳ ಹೊಟ್ಟೆಗೆ ಹೊಡೆದು ಹತ್ಯೆ ಮಾಡಿದ್ದ ಮಲತಾಯಿಯನ್ನು 8 ತಿಂಗಳ ಬಳಿಕ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಸಪ್ನಾ ನಾವಿ ಎಂದು ಗುರುತಿಸಲಾಗಿದೆ. ಆರೋಪಿ, 4 ವರ್ಷದ ಮಗಳ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ತಾನೇನೂ ಮಾಡಿಲ್ಲ ಎಂಬಂತೆ ಇದ್ದಳು. ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಕ್ರೌರ್ಯ ಬೆಳಕಿಗೆ ಬಂದಿದ್ದು, ಮಲತಾಯಿಯ ಅಸಲಿ ಬಣ್ಣ ಬಯಲಾಗಿದೆ.
ಸಮೃದ್ಧಿ ಎರಡು ವರ್ಷದ ಮಗುವಿದ್ದಾಗಲೇ ತಾಯಿ ತೀರಿಕೊಂಡಿದ್ದಳು. ಹೀಗಾಗಿ ಸಮೃದ್ಧಿ ತಂದೆ ರಾಯಣ್ಣ ಸಪ್ನಾಳನ್ನ ಎರಡನೇ ಮದುವೆ ಆಗಿದ್ದನು.
ಸಮೃದ್ಧಿ ತಂದೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ. ಇತ್ತ ಮಲತಾಯಿ ಕೆಎಸ್ಆರ್ಪಿ ಪೊಲೀಸ್ ಪೇದೆಯಾಗಿದ್ದಳು. ಎರಡನೇ ಮದುವೆ ಆದಾಗಿನಿಂದಲೂ ಮಗಳನ್ನ ಮಲತಾಯಿ ಸಪ್ನಾ ಆರೈಕೆ ಮಾಡುತ್ತಿದ್ದಳು.
2024ರ ಮೇ ತಿಂಗಳಲ್ಲಿ ಸಮೃದ್ಧಿ ರಾಯಣ್ಣ ನಾವಿ (4) ಸಾವನ್ನಪ್ಪಿದ್ದಳು. ಮಗುವಿನ ಅಜ್ಜ ಹಾಗೂ ಅಜ್ಜಿ ಸಪ್ನಾ ನಾವಿ ವಿರುದ್ಧ ಕೊಲೆ ಆರೋಪ ಮಾಡಿದ್ದರು. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಬಳಿಕ ಮೃತಪಟ್ಟ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಇದಾದ ಬೆನ್ನಲ್ಲೇ ಸಪ್ನಾ ನಾವಿ ನಿರೀಕ್ಷಣಾ ಜಾಮೀನು ಪಡೆದಿದ್ದಳು.
ಸದ್ಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಮಗುವಿನ ಹೊಟ್ಟೆಗೆ ಹೊಡೆದು, ಅಥವಾ ಒದ್ದು ಗಾಯಗೊಳಿಸಿ ಕೊಲೆ ಎಂದು ಸಾಬೀತಾಗಿದೆ. ಈ ಹಿನ್ನೆಲೆ ನಿರೀಕ್ಷಣಾ ಜಾಮೀನನ್ನು ರದ್ದು ಮಾಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ರದ್ದಾಗುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…