Crime

4 ವರ್ಷದ ಮಗಳ ಹತ್ಯೆಗೈದ ಮಲತಾಯಿ 8 ತಿಂಗಳ ಬಳಿಕ ಅಸಲಿ ಸತ್ಯ ಬಯಲು ಆರೋಪಿ ಬಂಧನ.

ಬೆಳಗಾವಿ: ತಾಯಿಯಿಲ್ಲದ ತಬ್ಬಲಿಯನ್ನ ಕಣ್ಣಲ್ಲಿ ಕಣ್ಣಿಟ್ಟು ಆರೈಕೆ ಮಾಡಬೇಕಿದ್ದ ಮಲತಾಯಿ ಮಗಳ ಹೊಟ್ಟೆಗೆ ಹೊಡೆದು ಹತ್ಯೆ ಮಾಡಿದ್ದ ಮಲತಾಯಿಯನ್ನು 8 ತಿಂಗಳ ಬಳಿಕ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಸಪ್ನಾ ನಾವಿ ಎಂದು ಗುರುತಿಸಲಾಗಿದೆ. ಆರೋಪಿ, 4 ವರ್ಷದ ಮಗಳ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ತಾನೇನೂ ಮಾಡಿಲ್ಲ ಎಂಬಂತೆ ಇದ್ದಳು. ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಕ್ರೌರ್ಯ ಬೆಳಕಿಗೆ ಬಂದಿದ್ದು, ಮಲತಾಯಿಯ ಅಸಲಿ ಬಣ್ಣ ಬಯಲಾಗಿದೆ.
ಸಮೃದ್ಧಿ ಎರಡು ವರ್ಷದ ಮಗುವಿದ್ದಾಗಲೇ ತಾಯಿ ತೀರಿಕೊಂಡಿದ್ದಳು. ಹೀಗಾಗಿ ಸಮೃದ್ಧಿ ತಂದೆ ರಾಯಣ್ಣ ಸಪ್ನಾಳನ್ನ ಎರಡನೇ ಮದುವೆ ಆಗಿದ್ದನು.
ಸಮೃದ್ಧಿ ತಂದೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ‌. ಇತ್ತ ಮಲತಾಯಿ ಕೆಎಸ್​​ಆರ್​ಪಿ ಪೊಲೀಸ್ ಪೇದೆಯಾಗಿದ್ದಳು. ಎರಡನೇ ಮದುವೆ ಆದಾಗಿನಿಂದಲೂ ಮಗಳನ್ನ ಮಲತಾಯಿ ಸಪ್ನಾ ಆರೈಕೆ ಮಾಡುತ್ತಿದ್ದಳು.
2024ರ ಮೇ ತಿಂಗಳಲ್ಲಿ ಸಮೃದ್ಧಿ ರಾಯಣ್ಣ ನಾವಿ (4) ಸಾವನ್ನಪ್ಪಿದ್ದಳು. ಮಗುವಿನ ಅಜ್ಜ ಹಾಗೂ ಅಜ್ಜಿ ಸಪ್ನಾ ನಾವಿ ವಿರುದ್ಧ ಕೊಲೆ ಆರೋಪ ಮಾಡಿದ್ದರು. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಬಳಿಕ ಮೃತಪಟ್ಟ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಇದಾದ ಬೆನ್ನಲ್ಲೇ ಸಪ್ನಾ ನಾವಿ ನಿರೀಕ್ಷಣಾ ಜಾಮೀನು ಪಡೆದಿದ್ದಳು.
ಸದ್ಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಮಗುವಿನ ಹೊಟ್ಟೆಗೆ ಹೊಡೆದು, ಅಥವಾ ಒದ್ದು ಗಾಯಗೊಳಿಸಿ ಕೊಲೆ ಎಂದು ಸಾಬೀತಾಗಿದೆ. ಈ ಹಿನ್ನೆಲೆ ನಿರೀಕ್ಷಣಾ ಜಾಮೀನನ್ನು ರದ್ದು ಮಾಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ರದ್ದಾಗುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago