ಖಚಿತ ಮಾಹಿತಿ ಪಡೆದ ಬೆಂಡಿಗೇರಿ ಪೊಲೀಸ್ ಠಾಣೆಯ ಸಿಪಿಐ ಶ್ಯಾಮರಾಜ್ ಸಜ್ಜನ್ ಮತ್ತು ಪಿಎಸ್ಐ ಶರಣ್ ದೇಸಾಯಿ ರವರು ಹುಬ್ಬಳ್ಳಿಯಲ್ಲಿ 2 ತಲೆಯ ಹಾವನ್ನು ಮಾರಾಟ ಮಾಡಲು ಬಂದಿದ್ದ ಖತರ್ನಾಕ್ ಆಸಾಮಿಗಳನ್ನೂ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಕಳೆದ ರಾತ್ರಿ ಖಚಿತ ಮಾಹಿತಿ ಮೇರೆಗೆ ಶ್ಯಾಮರಾಜ್ ಸಜ್ಜನ್ ಮತ್ತು ಶರಣ್ ದೇಸಾಯಿ ಹಾಗೂ ಸಿಬ್ಬಂದಿ ವರ್ಗದವರ ಜೊತೆ ಚರ್ಚಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಕಡೆ ಇರುವ ರಿಲಯನ್ಸ್ ಮಾರ್ಟ್ ಬಳಿ ದಾಳಿ ಮಾಡಿದಾಗ ಹೊರ ರಾಜ್ಯದ ಒಂದು ಕಾರಿನಲ್ಲಿ 3 ಜನ ಆಸಾಮಿಗಳು 2 ತಲೆಯ ಹಾವನ್ನು ಮಾರಾಟಕ್ಕೆ ತಂದಿರುವ ರಹಸ್ಯ ಬಯಲಾಗಿದೆ.
ಕೂಡಲೇ ಸಿಪಿಐ ಮತ್ತು ಪಿಎಸ್ಐ ರವರು ಈ ಸದರಿ ಆಸಾಮಿಗಳ ಮೇಲೆ ಅರಣ್ಯ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾರನ್ನು ವಶನ್ನು ಪಡೆದು 2 ತಲೆಯ ಹಾವನ್ನು ರಕ್ಷಣೆ ಮಾಡಿದ್ದರೆ ಹಾಗೂ ಈ 3 ಜನ ಆರೋಪಿತರು ರಾಯಚೂರು ಮೂಲದವರಾಗಿದ್ದು ತನಿಖೆಯಲ್ಲಿ ತಿಳಿದಿದ್ದು ಅವರನ್ನೂ ನ್ಯಾಯಾಂಗ ಬಂಧನ ಮಾಡಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ : ಶಿವು ಹುಬ್ಬಳ್ಳಿ .
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…