ಕೋಲಾರ ಗಲ್ ಪೇಟೆ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀ ವೆಂಕಟರಾಮಪ್ಪ ರವರು ತಮಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯವರೊಡನೆ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡಿ, ಕಟಾವು ಮಾಡುವ ದಂಧೆಯಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿರುತ್ತಾರೆ.ಆರೋಪಿಗಳು ಲಾರಿಯೊಂದರಲ್ಲಿ ಎತ್ತುಗಳನ್ನು ಆಂದ್ರಪ್ರದೇಶದ ಅನಂತಪುರದಿಂದ ಅಕ್ರಮವಾಗಿ ಸಾಗಾಣಿಕೆ ಮಾಡಿಕೊಂಡು ಬಂದು ಅವುಗಳನ್ನು ಕಠಾವು ಮಾಡುವ ಉದ್ದೇಶದಿಂದ ಕೋಲಾರದ ರಹಮತ್ನಗರದ ಶೆಡ್ ಒಂದರಲ್ಲಿ ಕೂಡುಹಾಕಿಕೊಂಡಿದ್ದರು. ಸರಿಯಾದ ವ್ಯವಸ್ಥೆ ಇರದ ಕಾರಣ ಮೂರು ಎತ್ತುಗಳು ಸತ್ತುಹೋಗಿದ್ದು ಈ ಅಮಾನವೀಯ ಕೃತ್ಯದ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಉಳಿದ 17 ಎತ್ತುಗಳು, 2 ಎಮ್ಮೆ ಕರುಗಳು ಮತ್ರು 3 ಹಸು ಕರುಗಳನ್ನು ರಕ್ಷಿಸಿ ಸುರಕ್ಷಿತವಾಗಿ ಗೋಶಾಲೆಗೆ ಬಿಡಲಾಗಿದೆ .
ವರದಿ : ರೋಶನ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…