ಅಕ್ಟೋಬರ್ ೬ರಂದು ನಡೆದಿದ್ದ ಈ ಕೊಲೆಯ ಹಿಂದಿನ ರಹಸ್ಯ ಈಗ ಬಯಲಾಗಿದೆ. ಮಲ್ಲವ್ವ ಜೀವಪ್ಪ ಕಮತೆ ಕೊಲೆಯಾದ ವೃದ್ಧೆ. ಕೊಲೆ ಮಾಡಿದವನು ಶಂಕರ್ ರಾಮಪ್ಪ ಪಾಟೀಲ್. ಅವನಿಗೆ ಸಹಾಯ ಮಾಡಿದ್ದು ಗೆಳೆಯ ಮಹೇಶ ಸದಾಶಿವ ಕಬಾಡಗೆ.
ಶಂಕರ ಪಾಟೀಲ್ ಕಷ್ಟ ಕಾಲದಲ್ಲಿ ವೃದ್ಧೆ ಮಲ್ಲವ್ವ ಅವರ ಕೈಕಾಲು ಹಿಡಿದು ೫೦,೦೦೦ ರೂ. ಸಾಲ ಪಡದಿದ್ದ. ಆದರೆ, ಅದನ್ನು ಹಿಂದಿರುಗಿಸಲೇ ಇಲ್ಲ. ವೃದ್ಧೆ ಆಗಾಗ ಕೇಳಲು ಶುರು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಹಣ ಹೊಂದಿಸುವ ಬದಲು ಅಜ್ಜಿಯನ್ನೇ ಮುಗಿಸಲು ಸಂಚು ಹೂಡಿದ.
ತನ್ನ ಗೆಳೆಯನಾಗಿರುವ ಮಹೇಶ ಸದಾಶಿವ ಕಬಾಡಗೆಯನ್ನು ಸೇರಿಸಿಕೊಂಡು ಅಜ್ಜಿಯ ಕುತ್ತಿಗೆಗೆ ಸೀರೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ. ಇಷ್ಟಕ್ಕೇ ತೃಪ್ತರಾಗದ ಈ ದುಷ್ಟರು ಮಲ್ಲವ್ವ ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ಕೂಡಾ ದೋಚಿದ್ದರು. ಸುಮಾರು ೧ ಲಕ್ಷ ಮೌಲ್ಯದ ಬಂಗಾರದ ಸರವನ್ನು ಅವರು ಕಿತ್ತುಕೊಂಡಿದ್ದರು.
ಆವತ್ತು ಕೊಲೆ ಮಾಡಿದವರು ಯಾರು ಎನ್ನುವ ಪ್ರಶ್ನೆ ಪೊಲೀಸರನ್ನು ಕಾಡಿತ್ತು. ಅಂತಿಮವಾಗಿ ಈ ಇಬ್ಬರ ಬಂಧನದೊಂದಿಗೆ ನಿಜ ಸಂಗತಿ ಹೊರಬಿದ್ದಿದೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…