Latest

ಸಾಲ ಕೊಟ್ಟ ಅಜ್ಜಿಯನ್ನೇ ಕೊಂದ ಕಿರಾತಕರು

ಅಕ್ಟೋಬರ್‌ ೬ರಂದು ನಡೆದಿದ್ದ ಈ ಕೊಲೆಯ ಹಿಂದಿನ ರಹಸ್ಯ ಈಗ ಬಯಲಾಗಿದೆ. ಮಲ್ಲವ್ವ ಜೀವಪ್ಪ ಕಮತೆ ಕೊಲೆಯಾದ ವೃದ್ಧೆ. ಕೊಲೆ ಮಾಡಿದವನು ಶಂಕರ್‌ ರಾಮಪ್ಪ ಪಾಟೀಲ್‌. ಅವನಿಗೆ ಸಹಾಯ ಮಾಡಿದ್ದು ಗೆಳೆಯ ಮಹೇಶ ಸದಾಶಿವ ಕಬಾಡಗೆ.
ಶಂಕರ ಪಾಟೀಲ್‌ ಕಷ್ಟ ಕಾಲದಲ್ಲಿ ವೃದ್ಧೆ ಮಲ್ಲವ್ವ ಅವರ ಕೈಕಾಲು ಹಿಡಿದು ೫೦,೦೦೦ ರೂ. ಸಾಲ ಪಡದಿದ್ದ. ಆದರೆ, ಅದನ್ನು ಹಿಂದಿರುಗಿಸಲೇ ಇಲ್ಲ. ವೃದ್ಧೆ ಆಗಾಗ ಕೇಳಲು ಶುರು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಹಣ ಹೊಂದಿಸುವ ಬದಲು ಅಜ್ಜಿಯನ್ನೇ ಮುಗಿಸಲು ಸಂಚು ಹೂಡಿದ.
ತನ್ನ ಗೆಳೆಯನಾಗಿರುವ ಮಹೇಶ ಸದಾಶಿವ ಕಬಾಡಗೆಯನ್ನು ಸೇರಿಸಿಕೊಂಡು ಅಜ್ಜಿಯ ಕುತ್ತಿಗೆಗೆ ಸೀರೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ. ಇಷ್ಟಕ್ಕೇ ತೃಪ್ತರಾಗದ ಈ ದುಷ್ಟರು ಮಲ್ಲವ್ವ ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ಕೂಡಾ ದೋಚಿದ್ದರು. ಸುಮಾರು ೧ ಲಕ್ಷ ಮೌಲ್ಯದ ಬಂಗಾರದ ಸರವನ್ನು ಅವರು ಕಿತ್ತುಕೊಂಡಿದ್ದರು.
ಆವತ್ತು ಕೊಲೆ ಮಾಡಿದವರು ಯಾರು ಎನ್ನುವ ಪ್ರಶ್ನೆ ಪೊಲೀಸರನ್ನು ಕಾಡಿತ್ತು. ಅಂತಿಮವಾಗಿ ಈ ಇಬ್ಬರ ಬಂಧನದೊಂದಿಗೆ ನಿಜ ಸಂಗತಿ ಹೊರಬಿದ್ದಿದೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 hour ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

1 hour ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

1 hour ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

1 hour ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

1 hour ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

1 hour ago