ರಾಯಚೂರಿನ ಪಶ್ಚಿಮ ಠಾಣೆ ಪೊಲೀಸರು ರಾಜ್ಯದಲ್ಲೇ ಅತಿದೊಡ್ಡ ಖೋಟಾ ನೋಟು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದ ಪೊಲೀಸರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಲಕ್ಷಾಂತರ ಮೌಲ್ಯದ ಖೋಟಾ ನೋಟುಗಳು ಮತ್ತು ಅವು ಮುದ್ರಿಸಲು ಬಳಸುತ್ತಿದ್ದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಖಚಿತ ಮಾಹಿತಿಯ ಮೇರೆಗೆ, ನಗರದಲ್ಲಿ ಪೊಲೀಸರು ದಾಳಿ ನಡೆಸಿ ಈ ಅಕ್ರಮ ಚಟುವಟಿಕೆಗೆ ಸಂಬಂಧಿಸಿದ ಅಡ್ಡೆಯನ್ನು ಪತ್ತೆ ಹಚ್ಚಿದ್ದಾರೆ. ದಾಳಿಯ ವೇಳೆ, ವೈಟ್ ಪೇಪರ್ ಸೇರಿದಂತೆ ನಕಲಿ ನೋಟು ತಯಾರಿಕೆಗೆ ಬಳಸಲಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್ಸ್ಟೇಬಲ್ ಮರಿಲಿಂಗ, ರಮೇಶ್ ಆದಿ, ಶಿವಲಿಂಗ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ದಾಳಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.
ಬೆಂಗಳೂರು, ಮೇ 3: ತಂತ್ರಜ್ಞಾನ ನಗರಿ ಬೆಂಗಳೂರಿಗೆ ಇದೀಗ ಕ್ರೈಂ ಸಿಟಿ ಎಂಬ ಬಿರುದೂ ಜೋಡಿಸುತ್ತಿರುವಂತಾಗಿದೆ. ನೈಸ್ ರಸ್ತೆಯ ಸಮೀಪ…
ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ 9ನೇ ಮುಖ್ಯ ರಸ್ತೆಯಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆದ ಆಯಂಬುಲೆನ್ಸ್ವೊಂದು ತರಕಾರಿ…
ಮಂಗಳೂರು: ಕಾವೂರು ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ತಲವಾರು ತೋರಿಸಿ ಇಬ್ಬರು ನಾಗರಿಕರನ್ನು ಬೆದರಿಸಿರುವ ಘಟನೆ ವರದಿಯಾಗಿದೆ. ಸಂಘಪರಿವಾರದ ಕಾರ್ಯಕರ್ತ…
ಬೆಂಗಳೂರು: ನಗರದ ಟಿ. ದಾಸರಹಳ್ಳಿಯ ಭುವನೇಶ್ವರಿ ನಗರದಲ್ಲಿ ನಡು ರಸ್ತೆಯಲ್ಲೇ ಯುವತಿಯೊಬ್ಬರ ಕೈ ಹಿಡಿದು ಕಿರುಕುಳ ನೀಡಿದ ಯುವಕನ ವಿರುದ್ದ…
ರಾಯಚೂರು: ಇತ್ತೀಚೆಗೆ ಉದ್ಘಾಟನೆಯಾದ ನೂತನ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಬಂದಿದೆ ಎಂಬ ಇಮೇಲ್ ಸಂದೇಶ one ಆತಂಕದ ವಾತಾವರಣ…
ಉಡುಪಿ: ಅಕ್ರಮ ಮರಳು ಸಾಗಣೆಯನ್ನು ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ ನಡೆದ ಘಟನೆ ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್…