Categories: CrimeLatest

ಅನೈತಿಕ ಸಂಬಂಧದ ರಕ್ತರಂಜಿತ ಅಂತ್ಯ: ಪತ್ನಿ-ಪ್ರಿಯಕರ ಸೇರಿ ಪತಿಯ ಕೊಲೆ!

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ.

ಸಾಗರದ ಜೆ.ಪಿ. ನಗರದ ನಿವಾಸಿ ಪರಶುರಾಮ್ (40) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಮಂಜು ಯಾನೆ ಟೀಪುಡಿ ಮಂಜು ಹಾಗೂ ಮೃತನ ಪತ್ನಿ ಚೈತ್ರಾ ಬಂಧಿತ ಆರೋಪಿಗಳಾಗಿದ್ದಾರೆ. ಮೇ 26ರಂದು ಪೊಲೀಸ್ ಇಲಾಖೆ ಅಧಿಕೃತವಾಗಿ ಪ್ರಕರಣದ ಮಾಹಿತಿ ಬಹಿರಂಗಪಡಿಸಿದೆ.

ಪೊಲೀಸರ ತನಿಖೆಯಲ್ಲಿ ಬೆಚ್ಚಿಬೀಳಿಸುವ ಅಂಶಗಳು ಬೆಳಕಿಗೆ ಬಂದಿವೆ. ಆರೋಪಿ ಮಂಜು ಹಾಗೂ ಚೈತ್ರಾ ನಡುವೆ ಅನೈತಿಕ ಸಂಬಂಧವಿದ್ದು, ಈ ವಿಚಾರ ತಿಳಿದ ಬಳಿಕ ಪರಶುರಾಮ್ ಹಾಗೂ ಚೈತ್ರಾ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಮೇ 15ರ ರಾತ್ರಿ ಇದೇ ವಿಚಾರವಾಗಿ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿದೆ. ವಿಷಯ ತಿಳಿದು ಚೈತ್ರಾಳ ಪ್ರಿಯಕರ ಮಂಜು ಮನೆಗೆ ಬಂದಿದ್ದು, ಪರಶುರಾಮ್ ಜೊತೆ ಗಲಾಟೆ ಆರಂಭವಾಗಿದೆ. ಜಗಳ ತಾರಕಕ್ಕೇರುತ್ತಿದ್ದಂತೆ ಪರಶುರಾಮ್ ಕುಡುಗೋಲು ಹಿಡಿದರೆ, ಮಂಜು ತನ್ನ ಬಳಿಯಿದ್ದ ಚಾಕುವಿನಿಂದ ದಾಳಿ ನಡೆಸಿದ್ದಾನೆ.

ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡ ಪರಶುರಾಮ್ ಅವರನ್ನು ತಕ್ಷಣವೇ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆ ಬಳಿಕ ಪತ್ನಿ ಚೈತ್ರಾ, ಇದನ್ನು ಕೇವಲ ಕೌಟುಂಬಿಕ ಜಗಳವೆಂದು ಬಿಂಬಿಸಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾಳೆ ಎನ್ನಲಾಗಿದೆ. ಆದರೆ ಪೊಲೀಸರು ತಮ್ಮ ತನಿಖೆಯಲ್ಲಿ ಅನೈತಿಕ ಸಂಬಂಧ ಹಾಗೂ ಕೊಲೆ ಸಂಚಿನ ಅಸಲಿ ಸತ್ಯವನ್ನು ಬಯಲಿಗೆಳೆದಿದ್ದಾರೆ.

ಪ್ರಸ್ತುತ ಚೂರಿಯಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಜು ಹಾಗೂ ಕೃತ್ಯ ಮರೆಮಾಚಲು ಸಹಕರಿಸಿದ ಆರೋಪದ ಮೇಲೆ ಚೈತ್ರಾಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

11 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

11 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

11 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

12 hours ago

ಮಳೆಗಾಲದ ಸೊಬಗಿನಲ್ಲಿ ಮಿಂದೇಳಿದ ಕಪ್ಪತ್ತಗುಡ್ಡ: ಪರಿಸರ ಪ್ರಿಯರನ್ನು ಕೈಬೀಸಿ ಕರೆಯುತ್ತಿರುವ ಉತ್ತರ ಕರ್ನಾಟಕದ ಸಹ್ಯಾದ್ರಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…

15 hours ago

ಹುಬ್ಬಳ್ಳಿಯಲ್ಲಿ ರೈಲ್ವೆ ಹಳಿ ಪಕ್ಕ ಯುವಕನ ಶವ ಪತ್ತೆ; ಪತ್ನಿಯೊಂದಿಗೆ ಕಲಹದ ಬಳಿಕ ವ್ಯಸನಕ್ಕೆ ಬಿದ್ದಿದ್ದ ಆರೋಪ

ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…

1 day ago