Latest

ಕಾಲುವೆಗೆ ಬಿದ್ದಿದ್ದ ಬಾಲಕನ ಶವ ಪತ್ತೆ.

ಸಿಂದಗಿ: ತಾಲೂಕಿನ ಹೊನ್ನಳ್ಳಿ ಗ್ರಾಮದ 9 ವರ್ಷದ ಬಾಲಕನ ಶವ ಯರಗಲ್ ಹತ್ತಿರದ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ: ಬಾಲಕ ಕಾಲುವೆಗೆ ಬಿದ್ದ ಘಟನೆ ಭಾನುವಾರ ನಡೆಡಿದ್ದು. ತಾಯಿ ಬಟ್ಟೆ ತೊಳೆಯಲು ಹೋದಾಗ ಬಾಲಕ ಸಿದ್ದಪ್ಪ ದೇವೇಂದ್ರ ಹುಣಶ್ಯಾಳ ತಾಯಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ಮನೆಗೆ ಹೋಗು ಎಂದು ತಾಯಿ ಹೇಳಿದರೂ ಕೇಳದೆ ಈಜುತ್ತೇನೆಂದು ಕಾಲುವಿಗೆ ಜಿಗಿದಿದ್ದಾನೆ ಎಂದು ಹೇಳಲಾಗುತ್ತಿದ್ದು,
ಹೊನ್ನಳ್ಳಿ ಗ್ರಾಮದ ದೇವೇಂದ್ರ ಹುಣಶ್ಯಾಳ ಹಾಗೂ ಲಲಿತಾ ಎಂಬುವರ ಏಕೈಕ ಮಗನಾಗಿದ್ದಾನೆ. ಈ ದಂಪತಿಗೆ ಐವರು ಪುತ್ರಿಯರಿದ್ದಾರೆ. ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಈ ಅನಾಹುತ ನಡೆದಿದ್ದು, ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ
.ಅಗ್ನಿಶಾಮಕ ಸಿಬ್ಬಂದಿ ನಿರಂತರ ಶೋಧ ಕಾರ್ಯ ನಡೆಸಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗಿದ್ದು ನೀರಿನ ಹರಿವು ಹೆಚ್ಚಾಗಿ ಇರುವುದರಿಂದ ಬಾಲಕನ ಪತ್ತೆ ಕಾರ್ಯ ತುಂಬಾ ಕಷ್ಟವಾಗಿದೆ ಎಂದು ತಿಳಿಸಿದ್ದರು.
ಕೊನೆಗೆ ಯರಗಲ್ಲ ಹತ್ತಿರದ ಕಾಲುವೆಯಲ್ಲಿ ಬಾಲಕನ ಶವ ಪತ್ತೆಯಾಗಿತ್ತು ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು. ಬಾಲಕನ ಮನೆಯವರಿಗೆ ಹಸ್ತಾಂತರಿಸಿದ್ದಾರೆ. ವರದಿ: ದಾವಲಸಾಬ ಬನ್ನೆಟ್ಟಿ

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 hour ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 hour ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago