ಸಿಂದಗಿ: ತಾಲೂಕಿನ ಹೊನ್ನಳ್ಳಿ ಗ್ರಾಮದ 9 ವರ್ಷದ ಬಾಲಕನ ಶವ ಯರಗಲ್ ಹತ್ತಿರದ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ: ಬಾಲಕ ಕಾಲುವೆಗೆ ಬಿದ್ದ ಘಟನೆ ಭಾನುವಾರ ನಡೆಡಿದ್ದು. ತಾಯಿ ಬಟ್ಟೆ ತೊಳೆಯಲು ಹೋದಾಗ ಬಾಲಕ ಸಿದ್ದಪ್ಪ ದೇವೇಂದ್ರ ಹುಣಶ್ಯಾಳ ತಾಯಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ಮನೆಗೆ ಹೋಗು ಎಂದು ತಾಯಿ ಹೇಳಿದರೂ ಕೇಳದೆ ಈಜುತ್ತೇನೆಂದು ಕಾಲುವಿಗೆ ಜಿಗಿದಿದ್ದಾನೆ ಎಂದು ಹೇಳಲಾಗುತ್ತಿದ್ದು,
ಹೊನ್ನಳ್ಳಿ ಗ್ರಾಮದ ದೇವೇಂದ್ರ ಹುಣಶ್ಯಾಳ ಹಾಗೂ ಲಲಿತಾ ಎಂಬುವರ ಏಕೈಕ ಮಗನಾಗಿದ್ದಾನೆ. ಈ ದಂಪತಿಗೆ ಐವರು ಪುತ್ರಿಯರಿದ್ದಾರೆ. ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಈ ಅನಾಹುತ ನಡೆದಿದ್ದು, ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ
.ಅಗ್ನಿಶಾಮಕ ಸಿಬ್ಬಂದಿ ನಿರಂತರ ಶೋಧ ಕಾರ್ಯ ನಡೆಸಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗಿದ್ದು ನೀರಿನ ಹರಿವು ಹೆಚ್ಚಾಗಿ ಇರುವುದರಿಂದ ಬಾಲಕನ ಪತ್ತೆ ಕಾರ್ಯ ತುಂಬಾ ಕಷ್ಟವಾಗಿದೆ ಎಂದು ತಿಳಿಸಿದ್ದರು.
ಕೊನೆಗೆ ಯರಗಲ್ಲ ಹತ್ತಿರದ ಕಾಲುವೆಯಲ್ಲಿ ಬಾಲಕನ ಶವ ಪತ್ತೆಯಾಗಿತ್ತು ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು. ಬಾಲಕನ ಮನೆಯವರಿಗೆ ಹಸ್ತಾಂತರಿಸಿದ್ದಾರೆ. ವರದಿ: ದಾವಲಸಾಬ ಬನ್ನೆಟ್ಟಿ
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…