ಸಿಂದಗಿ: ತಾಲೂಕಿನ ಹೊನ್ನಳ್ಳಿ ಗ್ರಾಮದ 9 ವರ್ಷದ ಬಾಲಕನ ಶವ ಯರಗಲ್ ಹತ್ತಿರದ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ: ಬಾಲಕ ಕಾಲುವೆಗೆ ಬಿದ್ದ ಘಟನೆ ಭಾನುವಾರ ನಡೆಡಿದ್ದು. ತಾಯಿ ಬಟ್ಟೆ ತೊಳೆಯಲು ಹೋದಾಗ ಬಾಲಕ ಸಿದ್ದಪ್ಪ ದೇವೇಂದ್ರ ಹುಣಶ್ಯಾಳ ತಾಯಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ಮನೆಗೆ ಹೋಗು ಎಂದು ತಾಯಿ ಹೇಳಿದರೂ ಕೇಳದೆ ಈಜುತ್ತೇನೆಂದು ಕಾಲುವಿಗೆ ಜಿಗಿದಿದ್ದಾನೆ ಎಂದು ಹೇಳಲಾಗುತ್ತಿದ್ದು,
ಹೊನ್ನಳ್ಳಿ ಗ್ರಾಮದ ದೇವೇಂದ್ರ ಹುಣಶ್ಯಾಳ ಹಾಗೂ ಲಲಿತಾ ಎಂಬುವರ ಏಕೈಕ ಮಗನಾಗಿದ್ದಾನೆ. ಈ ದಂಪತಿಗೆ ಐವರು ಪುತ್ರಿಯರಿದ್ದಾರೆ. ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಈ ಅನಾಹುತ ನಡೆದಿದ್ದು, ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ
.ಅಗ್ನಿಶಾಮಕ ಸಿಬ್ಬಂದಿ ನಿರಂತರ ಶೋಧ ಕಾರ್ಯ ನಡೆಸಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗಿದ್ದು ನೀರಿನ ಹರಿವು ಹೆಚ್ಚಾಗಿ ಇರುವುದರಿಂದ ಬಾಲಕನ ಪತ್ತೆ ಕಾರ್ಯ ತುಂಬಾ ಕಷ್ಟವಾಗಿದೆ ಎಂದು ತಿಳಿಸಿದ್ದರು.
ಕೊನೆಗೆ ಯರಗಲ್ಲ ಹತ್ತಿರದ ಕಾಲುವೆಯಲ್ಲಿ ಬಾಲಕನ ಶವ ಪತ್ತೆಯಾಗಿತ್ತು ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು. ಬಾಲಕನ ಮನೆಯವರಿಗೆ ಹಸ್ತಾಂತರಿಸಿದ್ದಾರೆ. ವರದಿ: ದಾವಲಸಾಬ ಬನ್ನೆಟ್ಟಿ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…