Latest

ಉದ್ಘಾಟನೆಗೂ ಮುನ್ನವೇ ಬಿರುಕು ಬಿಟ್ಟ ಕಟ್ಟಡ.

ಕುಂದಗೋಳ; ರಾಜ್ಯಾದ್ಯಾಂತ ಎಲ್ಲ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಸ ನಿರ್ವಹಣೆ ಮಾಡಬೇಕೆಂದು ಗ್ರಾಮೀಣ ಪ್ರದೇಶಗಳಲ್ಲಿ ಸರಕಾರ ಕಸ ನಿರ್ವಹಣೆ ಮಾಡುವುದರ ಜೊತೆಗೆ ತ್ಯಾಜ್ಯ ವಸ್ತುಗಳನ್ನು ಘಟಕದಲ್ಲಿ ಕ್ರೋಡೀಕರಿಸಿ ವಿಲೇವಾರಿ ಮಾಡಬೇಕೆಂದು ದೃಷ್ಟಿಯಿಂದ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಘನ ತ್ಯಾಜ್ಯ ನಿರ್ವಹಣ ಘಟಕ ಸ್ಥಾಪಿಸಿದೆ,

ಅದರಂತೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿ ಇದ್ದು, ಅಧಿಕಾರಿಗಳ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣತೊಡಗಿದೆ, ನಿರ್ಮಾಣಗೊಂಡು ಹಲವಾರು ದಿನಗಳು ಕಳೆದರು ಉದ್ಘಾಟನೆ ಭಾಗ್ಯ ಒಲಿದು ಬಂದಿಲ್ಲ.

ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಉದ್ಘಾಟನೆ ಹಂತಕ್ಕೆ ಬಂದು ತಲುಪಿದೆ. ಆದರೆ ಉದ್ಘಾಟನೆ ಮೊದಲು ಕಟ್ಟಡದ ಒಳಾಂಗಣದಲ್ಲಿ ಬಿರುಕು ಬಿಟ್ಟಿದೆ, ಅಂದರೆ ಕಳಪೆಗೆ ಹಿಡಿದ ಕೈಗನ್ನಡಿಯಾಗಿದೆ. ಘನತ್ಯಾಜ್ಯ ನಿರ್ವಹಣೆ ಘಟಕ ಬರೋಬ್ಬರಿ 12 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.

ಆದರೆ ಎಲ್ಲೆಡೆ ಕಟ್ಟಡ ಒಳ ಭಾಗದಲ್ಲಿ ನೆಲಹಾಸು, ಗೋಡೆ ಬಿರುಕು ಬಿಟ್ಟಿದ್ದು, ಅಧಿಕಾರಿಗಳ ಆಲಕ್ಷೇತನವೋ? ಅಥವಾ ಗುತ್ತಿಗೆದಾರನ ನಿರ್ಲಕ್ಷತನವೋ?

ಕಟ್ಟಡದ ಹೊರಭಾಗದ ಜಾಹೀರಾತಿನಲ್ಲಿ ಕಸ ‘ಮರುಬಳಕೆ’ ಮಾಡಬೇಡಿ ಅಂತ ಚಿತ್ರ ಬಿಡಸಬೇಕೆು ಆದರೆ ಕಸ ಮರಬಳಕೆ, ಅಂತ ತಪ್ಪಾಗಿ ಬಿಡಿಸಿ ದ್ದಾರೆ, ಇನ್ನೂ ಘನ ತ್ಯಾಜ್ಯ ನಿರ್ವಹಿಸುವುದು ಹೇಗೆ? ಇದು ಸರಿ ಆದರೆ ಘನ ತ್ಯಾಜ್ಯ ನಿರ್ವಹಿಸುವುದು ಹೆಗೇ ಅಂತ ತಪ್ಪಾಗಿ ಚಿತ್ರಿಸಿದ್ದಾರೆ.

ಒಟ್ಟಿನಲ್ಲಿ ಕಟ್ಟಡ ಸಂಪೂರ್ಣಗೊಂಡಿದ್ದರು ಉದ್ಘಾಟನೆಯಾಗಿಲ್ಲ ಮತ್ತೊಂದೆಡೆ ಕಳಪೆ ಕಾಮಗಾರಿಯಿಂದ ಬಿರುಕು ಬಿಟ್ಟಿದ್ದರು ಅಧಿಕಾರಿಗಳು ಯಾವುದೇ ರೀತಿಯ ಕ್ರಮಕ್ಕೆ ಮುಂದಾಗಿಲ್ಲ.

ವರದಿ:ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

3 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

4 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago