ಕುಂದಗೋಳ; ರಾಜ್ಯಾದ್ಯಾಂತ ಎಲ್ಲ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಸ ನಿರ್ವಹಣೆ ಮಾಡಬೇಕೆಂದು ಗ್ರಾಮೀಣ ಪ್ರದೇಶಗಳಲ್ಲಿ ಸರಕಾರ ಕಸ ನಿರ್ವಹಣೆ ಮಾಡುವುದರ ಜೊತೆಗೆ ತ್ಯಾಜ್ಯ ವಸ್ತುಗಳನ್ನು ಘಟಕದಲ್ಲಿ ಕ್ರೋಡೀಕರಿಸಿ ವಿಲೇವಾರಿ ಮಾಡಬೇಕೆಂದು ದೃಷ್ಟಿಯಿಂದ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಘನ ತ್ಯಾಜ್ಯ ನಿರ್ವಹಣ ಘಟಕ ಸ್ಥಾಪಿಸಿದೆ,
ಅದರಂತೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿ ಇದ್ದು, ಅಧಿಕಾರಿಗಳ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣತೊಡಗಿದೆ, ನಿರ್ಮಾಣಗೊಂಡು ಹಲವಾರು ದಿನಗಳು ಕಳೆದರು ಉದ್ಘಾಟನೆ ಭಾಗ್ಯ ಒಲಿದು ಬಂದಿಲ್ಲ.
ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಉದ್ಘಾಟನೆ ಹಂತಕ್ಕೆ ಬಂದು ತಲುಪಿದೆ. ಆದರೆ ಉದ್ಘಾಟನೆ ಮೊದಲು ಕಟ್ಟಡದ ಒಳಾಂಗಣದಲ್ಲಿ ಬಿರುಕು ಬಿಟ್ಟಿದೆ, ಅಂದರೆ ಕಳಪೆಗೆ ಹಿಡಿದ ಕೈಗನ್ನಡಿಯಾಗಿದೆ. ಘನತ್ಯಾಜ್ಯ ನಿರ್ವಹಣೆ ಘಟಕ ಬರೋಬ್ಬರಿ 12 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.
ಆದರೆ ಎಲ್ಲೆಡೆ ಕಟ್ಟಡ ಒಳ ಭಾಗದಲ್ಲಿ ನೆಲಹಾಸು, ಗೋಡೆ ಬಿರುಕು ಬಿಟ್ಟಿದ್ದು, ಅಧಿಕಾರಿಗಳ ಆಲಕ್ಷೇತನವೋ? ಅಥವಾ ಗುತ್ತಿಗೆದಾರನ ನಿರ್ಲಕ್ಷತನವೋ?
ಕಟ್ಟಡದ ಹೊರಭಾಗದ ಜಾಹೀರಾತಿನಲ್ಲಿ ಕಸ ‘ಮರುಬಳಕೆ’ ಮಾಡಬೇಡಿ ಅಂತ ಚಿತ್ರ ಬಿಡಸಬೇಕೆು ಆದರೆ ಕಸ ಮರಬಳಕೆ, ಅಂತ ತಪ್ಪಾಗಿ ಬಿಡಿಸಿ ದ್ದಾರೆ, ಇನ್ನೂ ಘನ ತ್ಯಾಜ್ಯ ನಿರ್ವಹಿಸುವುದು ಹೇಗೆ? ಇದು ಸರಿ ಆದರೆ ಘನ ತ್ಯಾಜ್ಯ ನಿರ್ವಹಿಸುವುದು ಹೆಗೇ ಅಂತ ತಪ್ಪಾಗಿ ಚಿತ್ರಿಸಿದ್ದಾರೆ.
ಒಟ್ಟಿನಲ್ಲಿ ಕಟ್ಟಡ ಸಂಪೂರ್ಣಗೊಂಡಿದ್ದರು ಉದ್ಘಾಟನೆಯಾಗಿಲ್ಲ ಮತ್ತೊಂದೆಡೆ ಕಳಪೆ ಕಾಮಗಾರಿಯಿಂದ ಬಿರುಕು ಬಿಟ್ಟಿದ್ದರು ಅಧಿಕಾರಿಗಳು ಯಾವುದೇ ರೀತಿಯ ಕ್ರಮಕ್ಕೆ ಮುಂದಾಗಿಲ್ಲ.
ವರದಿ:ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…