ಖಾನಾಪುರ: ಸೆಪ್ಟೆಂಬರ್ 12ರಂದು ಹಸುಗಳಿಗೆ ಮೇವು ತರಲು ಮನೆಯವರಿಗೆ ತಿಳಿಸಿ ರಾಮಚಂದ್ರ ಎಂಬಾತ ಹೊಲಕ್ಕೆ ತೆರಳಿರುತ್ತಾನೆ. ಎಷ್ಟೊತ್ತಾದರೂ ಮನೆಗೆ ಮರಳದ ಕಾರಣ ಎಲ್ಲಾ ಕಡೆ ಹುಡುಕಿ ಮನೆಯವರು ಖಾನಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿರುತ್ತಾರೆ.
ಅಕ್ಟೋಬರ್ 6ನೇ ತಾರೀಕು ಕೃಷಿ ಕಾರ್ಮಿಕರು ಜಮೀನುಗಳಿಗೆ ಕೆಲಸ ಮಾಡಲು ಹೋಗಿದ್ದಂತಹ ಸಂದರ್ಭದಲ್ಲಿ ವ್ಯಕ್ತಿ ಸುಟ್ಟು ಕರಕಲಾಗಿ ಬಿದ್ದಿರುವಂತದು ಕಂಡುಬರುತ್ತದೆ ಇದನ್ನು ಕಂಡ ಕೃಷಿ ಕಾರ್ಮಿಕರು ಖಾನಾಪುರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸುತ್ತಾರೆ.
ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ, ಇದು ಹೊಲಕ್ಕೆ ಮೇವು ತರಲು ಬಂದಿದ್ದಂತಹ ರಾಮಚಂದ್ರ ಎಂದು ಖಚಿತಪಡಿಸುತ್ತಾರೆ.
ಮೇವು ತರಲು ಹೋದಂತಹ ವ್ಯಕ್ತಿ ವಿದ್ಯುತ್ ಸ್ಪರ್ಶದಿಂದ ಸುಟ್ಟು ಕರಕಲಾಗಿದ್ದು ದೇಹ ಮತ್ತು ತಲೆ ಬೇರೆ ಬೇರೆ ಕಡೆ ಬಿದ್ದಿರುತ್ತವೆ. ಗ್ರಾಮದಿಂದ ದೂರದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಇಂತಹ ಘಟನೆ ನಡೆದಿರುವ ಕಾರಣ ತಡವಾಗಿ ಬೆಳಕಿಗೆ ಬಂದಿರುತ್ತದೆ.
ರಾಮಚಂದ್ರನ ಕುಟುಂಬದವರು ಇದಕ್ಕೆಲ್ಲ ಎಸ್ಕಾಂ ಕಾರಣ ಹಲವು ಬಾರಿ ಗ್ರಾಮದ ಜನರು ದೂರನ್ನು ನೀಡಿದರು ಸಹ ವಿದ್ಯುತ್ ತಂತಿಗಳನ್ನು ಸರಿಪಡಿಸದೆ ಎಲ್ಲೆಂದರಲ್ಲಿ ಬಿಟ್ಟಿದ್ದರು ಅದಕ್ಕಾಗಿ ಈ ರೀತಿ ಆಗಿರುವುದು ಎಂದು ದೂರಿದ್ದಾರೆ.
ಸದ್ಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಸ್ಕಾಂನ ಖಾನಾಪುರ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…