ಖಾನಾಪುರ: ಸೆಪ್ಟೆಂಬರ್ 12ರಂದು ಹಸುಗಳಿಗೆ ಮೇವು ತರಲು ಮನೆಯವರಿಗೆ ತಿಳಿಸಿ ರಾಮಚಂದ್ರ ಎಂಬಾತ ಹೊಲಕ್ಕೆ ತೆರಳಿರುತ್ತಾನೆ. ಎಷ್ಟೊತ್ತಾದರೂ ಮನೆಗೆ ಮರಳದ ಕಾರಣ ಎಲ್ಲಾ ಕಡೆ ಹುಡುಕಿ ಮನೆಯವರು ಖಾನಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿರುತ್ತಾರೆ.
ಅಕ್ಟೋಬರ್ 6ನೇ ತಾರೀಕು ಕೃಷಿ ಕಾರ್ಮಿಕರು ಜಮೀನುಗಳಿಗೆ ಕೆಲಸ ಮಾಡಲು ಹೋಗಿದ್ದಂತಹ ಸಂದರ್ಭದಲ್ಲಿ ವ್ಯಕ್ತಿ ಸುಟ್ಟು ಕರಕಲಾಗಿ ಬಿದ್ದಿರುವಂತದು ಕಂಡುಬರುತ್ತದೆ ಇದನ್ನು ಕಂಡ ಕೃಷಿ ಕಾರ್ಮಿಕರು ಖಾನಾಪುರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸುತ್ತಾರೆ.
ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ, ಇದು ಹೊಲಕ್ಕೆ ಮೇವು ತರಲು ಬಂದಿದ್ದಂತಹ ರಾಮಚಂದ್ರ ಎಂದು ಖಚಿತಪಡಿಸುತ್ತಾರೆ.
ಮೇವು ತರಲು ಹೋದಂತಹ ವ್ಯಕ್ತಿ ವಿದ್ಯುತ್ ಸ್ಪರ್ಶದಿಂದ ಸುಟ್ಟು ಕರಕಲಾಗಿದ್ದು ದೇಹ ಮತ್ತು ತಲೆ ಬೇರೆ ಬೇರೆ ಕಡೆ ಬಿದ್ದಿರುತ್ತವೆ. ಗ್ರಾಮದಿಂದ ದೂರದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಇಂತಹ ಘಟನೆ ನಡೆದಿರುವ ಕಾರಣ ತಡವಾಗಿ ಬೆಳಕಿಗೆ ಬಂದಿರುತ್ತದೆ.
ರಾಮಚಂದ್ರನ ಕುಟುಂಬದವರು ಇದಕ್ಕೆಲ್ಲ ಎಸ್ಕಾಂ ಕಾರಣ ಹಲವು ಬಾರಿ ಗ್ರಾಮದ ಜನರು ದೂರನ್ನು ನೀಡಿದರು ಸಹ ವಿದ್ಯುತ್ ತಂತಿಗಳನ್ನು ಸರಿಪಡಿಸದೆ ಎಲ್ಲೆಂದರಲ್ಲಿ ಬಿಟ್ಟಿದ್ದರು ಅದಕ್ಕಾಗಿ ಈ ರೀತಿ ಆಗಿರುವುದು ಎಂದು ದೂರಿದ್ದಾರೆ.
ಸದ್ಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಸ್ಕಾಂನ ಖಾನಾಪುರ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…