Latest

ಬಸ್ ಅವ್ಯವಸ್ಥೆ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಪರದಾಟ

ಗ್ರಾಮೀಣ ಭಾಗದ ಜನರು. ವಿದ್ಯಾರ್ಥಿಗಳು ಶಿಕ್ಷಣ ಪಡಿಯಬೇಕೆಂದರೆ ಸಾಮಾನ್ಯ ವಾಗಿ ನಗರಕ್ಕೆ. ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಹಾಗೆ ಜನರು ತಮ್ಮ ಜೀವನ ಕಟ್ಟಿಕೊಳ್ಳಲು ಪಟ್ಟಣಕ್ಕೆ ಹೋಗುವುದು ತುಂಬಾ ಅವಶ್ಯಕ ಹಾಗಾಗಿ ಬೆಳಗ್ಗೆ ಪ್ರಯಾಣ ಬೆಳೆಸಬೇಕು ಅಂತ ಬಸ್ ಸ್ಟಾಪ್ ಅಲ್ಲಿ ಬಂದು ನಿಂತು ಬಸ್ ಗಾಗಿ ಕಾಯ್ತಿರಬೇಕಾದರೆ ಕೆಲವು ಬಸ್ಸುಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ ಹಾಗೆ ಒಂದೊಂದು ಬಾರಿ ಬಸ್ ನಿಲ್ಲಿಸುವುದಿಲ್ಲ.
ಹೌದು ಇದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮುಖ್ಯ ಹೆದ್ದಾರಿಗೆ ಬರುವ ಅಫಜಲಪುರ ತಾಲೂಕಿನ ಅತಿ ದೊಡ್ಡ ಗ್ರಾಮಗಳ ಪಟ್ಟಿಯಲ್ಲಿರುವ ಗೊಬ್ಬುರ ಬಿ ಗ್ರಾಮದಲ್ಲಿ ದಿನನಿತ್ಯ ನಡೀತಿರೋ ಘಟನೆ, ಪ್ರತಿನಿತ್ಯ ಗೊಬ್ಬುರ ಬಿ ಗ್ರಾಮದಿಂದ ನೂರಾರು ಜನರು ಹಾಗೂ ವಿದ್ಯಾರ್ಥಿಗಳು ಕಲಬುರಗಿಯ ಕಡೆ ಪ್ರಯಾಣ ಬೆಳೆಸುತ್ತಾರೆ ಆದರೆ ಗೊಬ್ಬುರದಿಂದ ಕಲಬುರಗಿ ಕಡೆ ಬರೋದಕ್ಕೆ ಒಂದೇ ಮಾರ್ಗ ಇರೋದ್ರಿಂದ ದಿನನಿತ್ಯ ಬೆಳಿಗ್ಗೆ ಅಫಜಲಪುರದಿಂದ ಬರುವ ಬಸ್ಸುಗಳು ಅತನೂರ, ಚೌಡಾಪುರದಲ್ಲಿಯೇ ತುಂಬಿಕೊಂಡು ಬರುತ್ತಿರುವುದರಿಂದ ಗೊಬ್ಬುರ ಬಿ ಗ್ರಾಮದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಈ ತೊಂದರೆಗೆ ಮುಖ್ಯ ಕಾರಣವೆಂದರೆ ಅಫಜಲಪುರ ಬಸ್ ಘಟಕದ ಬೇಜವಾಬ್ದಾರಿತನ ಬಸ್ಸುಗಳ ಸಮಯ ಕಾಪಾಡದೇ ಇರುವುದು ಹಾಗೂ ಕೆಲವು ಬಸ್ಸುಗಳನ್ನು ನಾನ್ ಸ್ಟಾಪ್ ಹೆಸರಿನಲ್ಲಿ ಓಡಿಸುತ್ತಿರುವುದು ಅದರಲ್ಲಿ ಕೂಡ ವಿದ್ಯಾರ್ಥಿಗಳ ಪಾಸುಗಳನ್ನು ನಡೆಸಿಕೊಳ್ಳುತ್ತಿಲ್ಲ ಎಂಬುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಕೆಲವು ಬಸ್ಸುಗಳು ಸರಿಯಾದ ಸಮಯಕ್ಕೆ ಬಾರದೆ ಇದ್ದಾಗ ಮುಂದೆ ಬರುವ ಬಸ್ ವಿದ್ಯಾರ್ಥಿಗಳು ಮತ್ತು ಜನರಿಂದ ತುಂಬಿಕೊಂಡು ಗ್ರಾಮದ ಪ್ರಯಾಣಿಕರಿಗೆ, ಮಹಿಳೆಯರಿಗೆ & ರೋಗಿಗಳಿಗೆ ಬಸ್ಸುಗಳಲ್ಲಿ ಜಾಗವಿರುವುದಿಲ್ಲ. ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗೊಬ್ಬುರ ಬಿ ಮಾರ್ಗವಾಗಿ ಬರುವ ಬಸ್ಸುಗಳನ್ನು ಬೆಳಗಿನ ಸಮಯ ಹೆಚ್ಚುವರಿಯಾಗಿ ಹಾಗೂ ಸರಿಯಾದ ಸಮಯ ಕಾಪಾಡಿಕೊಳ್ಳಬೇಕು ನೀಡಬೇಕೆಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮದ್ಯದ ದರ ಏರಿಕೆ ಶಾಕ್: ‘ಎಕಾನಮಿ’ ಬ್ರ್ಯಾಂಡ್‌ಗಳೇ ಹೆಚ್ಚು ದುಬಾರಿ

ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…

9 hours ago

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…

10 hours ago

ಶಿರಸಿ ವೈದ್ಯನ ಕೊಲೆ ರಹಸ್ಯ ಬಯಲು: ಮದುವೆ ಮುನ್ನವೇ ಸ್ನೇಹಿತನಿಂದ ಕ್ರೂರ ಹತ್ಯೆ.!

ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…

10 hours ago

“ಉದ್ಯೋಗವೇ ಜೀವನವಲ್ಲ”: ಕೆಲಸ ಕಳೆದುಕೊಂಡ ಬಳಿಕ ಯುವತಿಯ ಮನವರಿಕೆಯ ಮಾತುಗಳು ವೈರಲ್

ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…

14 hours ago

ಶವಪೆಟ್ಟಿಗೆಯ ಮುಂದೆ ಬಯಲಾಯ್ತು ಡಬಲ್ ಲವ್ ಸ್ಟೋರಿ: ಇಬ್ಬರು ಪ್ರೇಯಸಿಯರ ಮಧ್ಯೆ ಭಾರೀ ಗಲಾಟೆ!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…

15 hours ago

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ಭರ್ತಿ: ಯುವಕರಿಗೆ ಭರ್ಜರಿ ಸರ್ಕಾರಿ ಉದ್ಯೋಗ ಅವಕಾಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…

19 hours ago