Latest

ಬಸ್ ಅವ್ಯವಸ್ಥೆ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಪರದಾಟ

ಗ್ರಾಮೀಣ ಭಾಗದ ಜನರು. ವಿದ್ಯಾರ್ಥಿಗಳು ಶಿಕ್ಷಣ ಪಡಿಯಬೇಕೆಂದರೆ ಸಾಮಾನ್ಯ ವಾಗಿ ನಗರಕ್ಕೆ. ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಹಾಗೆ ಜನರು ತಮ್ಮ ಜೀವನ ಕಟ್ಟಿಕೊಳ್ಳಲು ಪಟ್ಟಣಕ್ಕೆ ಹೋಗುವುದು ತುಂಬಾ ಅವಶ್ಯಕ ಹಾಗಾಗಿ ಬೆಳಗ್ಗೆ ಪ್ರಯಾಣ ಬೆಳೆಸಬೇಕು ಅಂತ ಬಸ್ ಸ್ಟಾಪ್ ಅಲ್ಲಿ ಬಂದು ನಿಂತು ಬಸ್ ಗಾಗಿ ಕಾಯ್ತಿರಬೇಕಾದರೆ ಕೆಲವು ಬಸ್ಸುಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ ಹಾಗೆ ಒಂದೊಂದು ಬಾರಿ ಬಸ್ ನಿಲ್ಲಿಸುವುದಿಲ್ಲ.
ಹೌದು ಇದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮುಖ್ಯ ಹೆದ್ದಾರಿಗೆ ಬರುವ ಅಫಜಲಪುರ ತಾಲೂಕಿನ ಅತಿ ದೊಡ್ಡ ಗ್ರಾಮಗಳ ಪಟ್ಟಿಯಲ್ಲಿರುವ ಗೊಬ್ಬುರ ಬಿ ಗ್ರಾಮದಲ್ಲಿ ದಿನನಿತ್ಯ ನಡೀತಿರೋ ಘಟನೆ, ಪ್ರತಿನಿತ್ಯ ಗೊಬ್ಬುರ ಬಿ ಗ್ರಾಮದಿಂದ ನೂರಾರು ಜನರು ಹಾಗೂ ವಿದ್ಯಾರ್ಥಿಗಳು ಕಲಬುರಗಿಯ ಕಡೆ ಪ್ರಯಾಣ ಬೆಳೆಸುತ್ತಾರೆ ಆದರೆ ಗೊಬ್ಬುರದಿಂದ ಕಲಬುರಗಿ ಕಡೆ ಬರೋದಕ್ಕೆ ಒಂದೇ ಮಾರ್ಗ ಇರೋದ್ರಿಂದ ದಿನನಿತ್ಯ ಬೆಳಿಗ್ಗೆ ಅಫಜಲಪುರದಿಂದ ಬರುವ ಬಸ್ಸುಗಳು ಅತನೂರ, ಚೌಡಾಪುರದಲ್ಲಿಯೇ ತುಂಬಿಕೊಂಡು ಬರುತ್ತಿರುವುದರಿಂದ ಗೊಬ್ಬುರ ಬಿ ಗ್ರಾಮದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಈ ತೊಂದರೆಗೆ ಮುಖ್ಯ ಕಾರಣವೆಂದರೆ ಅಫಜಲಪುರ ಬಸ್ ಘಟಕದ ಬೇಜವಾಬ್ದಾರಿತನ ಬಸ್ಸುಗಳ ಸಮಯ ಕಾಪಾಡದೇ ಇರುವುದು ಹಾಗೂ ಕೆಲವು ಬಸ್ಸುಗಳನ್ನು ನಾನ್ ಸ್ಟಾಪ್ ಹೆಸರಿನಲ್ಲಿ ಓಡಿಸುತ್ತಿರುವುದು ಅದರಲ್ಲಿ ಕೂಡ ವಿದ್ಯಾರ್ಥಿಗಳ ಪಾಸುಗಳನ್ನು ನಡೆಸಿಕೊಳ್ಳುತ್ತಿಲ್ಲ ಎಂಬುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಕೆಲವು ಬಸ್ಸುಗಳು ಸರಿಯಾದ ಸಮಯಕ್ಕೆ ಬಾರದೆ ಇದ್ದಾಗ ಮುಂದೆ ಬರುವ ಬಸ್ ವಿದ್ಯಾರ್ಥಿಗಳು ಮತ್ತು ಜನರಿಂದ ತುಂಬಿಕೊಂಡು ಗ್ರಾಮದ ಪ್ರಯಾಣಿಕರಿಗೆ, ಮಹಿಳೆಯರಿಗೆ & ರೋಗಿಗಳಿಗೆ ಬಸ್ಸುಗಳಲ್ಲಿ ಜಾಗವಿರುವುದಿಲ್ಲ. ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗೊಬ್ಬುರ ಬಿ ಮಾರ್ಗವಾಗಿ ಬರುವ ಬಸ್ಸುಗಳನ್ನು ಬೆಳಗಿನ ಸಮಯ ಹೆಚ್ಚುವರಿಯಾಗಿ ಹಾಗೂ ಸರಿಯಾದ ಸಮಯ ಕಾಪಾಡಿಕೊಳ್ಳಬೇಕು ನೀಡಬೇಕೆಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

10 minutes ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

12 minutes ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

4 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

4 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

4 hours ago