Latest

ಬಸ್ ಅವ್ಯವಸ್ಥೆ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಪರದಾಟ

ಗ್ರಾಮೀಣ ಭಾಗದ ಜನರು. ವಿದ್ಯಾರ್ಥಿಗಳು ಶಿಕ್ಷಣ ಪಡಿಯಬೇಕೆಂದರೆ ಸಾಮಾನ್ಯ ವಾಗಿ ನಗರಕ್ಕೆ. ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಹಾಗೆ ಜನರು ತಮ್ಮ ಜೀವನ ಕಟ್ಟಿಕೊಳ್ಳಲು ಪಟ್ಟಣಕ್ಕೆ ಹೋಗುವುದು ತುಂಬಾ ಅವಶ್ಯಕ ಹಾಗಾಗಿ ಬೆಳಗ್ಗೆ ಪ್ರಯಾಣ ಬೆಳೆಸಬೇಕು ಅಂತ ಬಸ್ ಸ್ಟಾಪ್ ಅಲ್ಲಿ ಬಂದು ನಿಂತು ಬಸ್ ಗಾಗಿ ಕಾಯ್ತಿರಬೇಕಾದರೆ ಕೆಲವು ಬಸ್ಸುಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ ಹಾಗೆ ಒಂದೊಂದು ಬಾರಿ ಬಸ್ ನಿಲ್ಲಿಸುವುದಿಲ್ಲ.
ಹೌದು ಇದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮುಖ್ಯ ಹೆದ್ದಾರಿಗೆ ಬರುವ ಅಫಜಲಪುರ ತಾಲೂಕಿನ ಅತಿ ದೊಡ್ಡ ಗ್ರಾಮಗಳ ಪಟ್ಟಿಯಲ್ಲಿರುವ ಗೊಬ್ಬುರ ಬಿ ಗ್ರಾಮದಲ್ಲಿ ದಿನನಿತ್ಯ ನಡೀತಿರೋ ಘಟನೆ, ಪ್ರತಿನಿತ್ಯ ಗೊಬ್ಬುರ ಬಿ ಗ್ರಾಮದಿಂದ ನೂರಾರು ಜನರು ಹಾಗೂ ವಿದ್ಯಾರ್ಥಿಗಳು ಕಲಬುರಗಿಯ ಕಡೆ ಪ್ರಯಾಣ ಬೆಳೆಸುತ್ತಾರೆ ಆದರೆ ಗೊಬ್ಬುರದಿಂದ ಕಲಬುರಗಿ ಕಡೆ ಬರೋದಕ್ಕೆ ಒಂದೇ ಮಾರ್ಗ ಇರೋದ್ರಿಂದ ದಿನನಿತ್ಯ ಬೆಳಿಗ್ಗೆ ಅಫಜಲಪುರದಿಂದ ಬರುವ ಬಸ್ಸುಗಳು ಅತನೂರ, ಚೌಡಾಪುರದಲ್ಲಿಯೇ ತುಂಬಿಕೊಂಡು ಬರುತ್ತಿರುವುದರಿಂದ ಗೊಬ್ಬುರ ಬಿ ಗ್ರಾಮದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಈ ತೊಂದರೆಗೆ ಮುಖ್ಯ ಕಾರಣವೆಂದರೆ ಅಫಜಲಪುರ ಬಸ್ ಘಟಕದ ಬೇಜವಾಬ್ದಾರಿತನ ಬಸ್ಸುಗಳ ಸಮಯ ಕಾಪಾಡದೇ ಇರುವುದು ಹಾಗೂ ಕೆಲವು ಬಸ್ಸುಗಳನ್ನು ನಾನ್ ಸ್ಟಾಪ್ ಹೆಸರಿನಲ್ಲಿ ಓಡಿಸುತ್ತಿರುವುದು ಅದರಲ್ಲಿ ಕೂಡ ವಿದ್ಯಾರ್ಥಿಗಳ ಪಾಸುಗಳನ್ನು ನಡೆಸಿಕೊಳ್ಳುತ್ತಿಲ್ಲ ಎಂಬುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಕೆಲವು ಬಸ್ಸುಗಳು ಸರಿಯಾದ ಸಮಯಕ್ಕೆ ಬಾರದೆ ಇದ್ದಾಗ ಮುಂದೆ ಬರುವ ಬಸ್ ವಿದ್ಯಾರ್ಥಿಗಳು ಮತ್ತು ಜನರಿಂದ ತುಂಬಿಕೊಂಡು ಗ್ರಾಮದ ಪ್ರಯಾಣಿಕರಿಗೆ, ಮಹಿಳೆಯರಿಗೆ & ರೋಗಿಗಳಿಗೆ ಬಸ್ಸುಗಳಲ್ಲಿ ಜಾಗವಿರುವುದಿಲ್ಲ. ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗೊಬ್ಬುರ ಬಿ ಮಾರ್ಗವಾಗಿ ಬರುವ ಬಸ್ಸುಗಳನ್ನು ಬೆಳಗಿನ ಸಮಯ ಹೆಚ್ಚುವರಿಯಾಗಿ ಹಾಗೂ ಸರಿಯಾದ ಸಮಯ ಕಾಪಾಡಿಕೊಳ್ಳಬೇಕು ನೀಡಬೇಕೆಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

5 hours ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

5 hours ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

5 hours ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

5 hours ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

5 hours ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

5 hours ago