ಚಿಂಚೋಳಿ ಬಸ್ ನಿಲ್ದಾಣದಿಂದ ಕಳ್ಳತನವಾಗಿದ್ದ ಬಸ್ಸನ್ನು ಘಟನೆ ನಡೆದ 13 ಗಂಟೆಯಲ್ಲಿ ಚಿಂಚೋಳಿ ಠಾಣೆ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ ನುಸುಕಿನ ಜಾವ 3.30 ಸುಮಾರಿಗೆ ಕಲಬುರಗಿ ಜಿಲ್ಲೆ ಚಿಂಚೋಳ್ಳಿ ಪಟ್ಟಣದಲ್ಲಿರುವ ಬಸ್ ನಿಲ್ದಾಣದಿಂದ ಬೀದರ್ ಡಿಪೋದ KA38F971 ಸಂಖ್ಯೆಯ ಬಸ್ ಕಳ್ಳತನಾಗಿತ್ತು. ಈ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳತನವಾಗಿರುವ ಬಸ್ಸಿಗಾಗಿ ಹುಡುಕಾಟ ನಡೆಸಿದ್ದು, ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಸ್ ಪತ್ತೆಯಾಗಿದೆ.
ಸ್ವಾರಸ್ಯವೆಂದರೆ, ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮುಂದೆಯೇ ಖದೀಮರು ಬಸ್ಸನ್ನು ಚಲಾಯಿಸಿಕೊಂಡು ಹೋಗಿದ್ದರು. ಆದರೆ ಸರ್ಕಾರಿ ಬಸ್ಸು ಆದ್ದರಿಂದ ಅನುಮಾನ ವ್ಯಕ್ತಪಡಿಸದ ಪೊಲೀಸರು ಸುಮ್ಮನಾಗಿದ್ದರು. ಖದೀಮರು ಬಸ್ಸನ್ನು ತಾಂಡಾದ ಹೊರವಲಯದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಬಸ್ ಇರೋದನ್ನು ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…