ಚಿಂಚೋಳಿ ಬಸ್ ನಿಲ್ದಾಣದಿಂದ ಕಳ್ಳತನವಾಗಿದ್ದ ಬಸ್ಸನ್ನು ಘಟನೆ ನಡೆದ 13 ಗಂಟೆಯಲ್ಲಿ ಚಿಂಚೋಳಿ ಠಾಣೆ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ ನುಸುಕಿನ ಜಾವ 3.30 ಸುಮಾರಿಗೆ ಕಲಬುರಗಿ ಜಿಲ್ಲೆ ಚಿಂಚೋಳ್ಳಿ ಪಟ್ಟಣದಲ್ಲಿರುವ ಬಸ್ ನಿಲ್ದಾಣದಿಂದ ಬೀದರ್ ಡಿಪೋದ KA38F971 ಸಂಖ್ಯೆಯ ಬಸ್ ಕಳ್ಳತನಾಗಿತ್ತು. ಈ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳತನವಾಗಿರುವ ಬಸ್ಸಿಗಾಗಿ ಹುಡುಕಾಟ ನಡೆಸಿದ್ದು, ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಸ್ ಪತ್ತೆಯಾಗಿದೆ.
ಸ್ವಾರಸ್ಯವೆಂದರೆ, ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮುಂದೆಯೇ ಖದೀಮರು ಬಸ್ಸನ್ನು ಚಲಾಯಿಸಿಕೊಂಡು ಹೋಗಿದ್ದರು. ಆದರೆ ಸರ್ಕಾರಿ ಬಸ್ಸು ಆದ್ದರಿಂದ ಅನುಮಾನ ವ್ಯಕ್ತಪಡಿಸದ ಪೊಲೀಸರು ಸುಮ್ಮನಾಗಿದ್ದರು. ಖದೀಮರು ಬಸ್ಸನ್ನು ತಾಂಡಾದ ಹೊರವಲಯದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಬಸ್ ಇರೋದನ್ನು ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…