ಚಿಂಚೋಳಿ ಬಸ್ ನಿಲ್ದಾಣದಿಂದ ಕಳ್ಳತನವಾಗಿದ್ದ ಬಸ್ಸನ್ನು ಘಟನೆ ನಡೆದ 13 ಗಂಟೆಯಲ್ಲಿ ಚಿಂಚೋಳಿ ಠಾಣೆ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ ನುಸುಕಿನ ಜಾವ 3.30 ಸುಮಾರಿಗೆ ಕಲಬುರಗಿ ಜಿಲ್ಲೆ ಚಿಂಚೋಳ್ಳಿ ಪಟ್ಟಣದಲ್ಲಿರುವ ಬಸ್ ನಿಲ್ದಾಣದಿಂದ ಬೀದರ್ ಡಿಪೋದ KA38F971 ಸಂಖ್ಯೆಯ ಬಸ್ ಕಳ್ಳತನಾಗಿತ್ತು. ಈ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳತನವಾಗಿರುವ ಬಸ್ಸಿಗಾಗಿ ಹುಡುಕಾಟ ನಡೆಸಿದ್ದು, ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಸ್ ಪತ್ತೆಯಾಗಿದೆ.
ಸ್ವಾರಸ್ಯವೆಂದರೆ, ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮುಂದೆಯೇ ಖದೀಮರು ಬಸ್ಸನ್ನು ಚಲಾಯಿಸಿಕೊಂಡು ಹೋಗಿದ್ದರು. ಆದರೆ ಸರ್ಕಾರಿ ಬಸ್ಸು ಆದ್ದರಿಂದ ಅನುಮಾನ ವ್ಯಕ್ತಪಡಿಸದ ಪೊಲೀಸರು ಸುಮ್ಮನಾಗಿದ್ದರು. ಖದೀಮರು ಬಸ್ಸನ್ನು ತಾಂಡಾದ ಹೊರವಲಯದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಬಸ್ ಇರೋದನ್ನು ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…
ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…
ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…
ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…