Latest

ಲಾರಿ ಅಡ್ಡಗಟ್ಟಿ ಹಣ ಬೇಡಿದ ಪ್ರಕರಣ: ಶೃಂಗೇರಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳನ್ನು ಬಂಧಿಸಿದ್ದ ಪೊಲೀಸರು

ಬಾಳೆಹೊನ್ನೂರು: ಲಾರಿಯನ್ನು ಅಡ್ಡಗಟ್ಟಿ ಹಣಕ್ಕಾಗಿ ಬೇಡಿಕೆ ಇಟ್ಟು, ಚಾಲಕನಿಗೆ ಹಲ್ಲೆ ಮಾಡಿದ ಆರೋಪದ ಮೇಲೆ ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದೀಪ್ ಹಾಗೂ ಮೆಣಸೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಂಜು ಅವರನ್ನು ಬಾಳೆಹೊನ್ನೂರು ಪೊಲೀಸರು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಈ ಘಟನೆ ಬಾಳೆಹೊನ್ನೂರು ಸಮೀಪ ಹರಿಗೆ ಎಂಬಲ್ಲಿ ನಡೆದಿದೆ. ಕಾಫಿ ಸಾಗಣಿಕೆ ಮಾಡುತ್ತಿದ್ದ ಲಾರಿಯನ್ನು ಸರ್ಕಾರಿ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ತಡೆದು ನಿಲ್ಲಿಸಿದ್ದಾರೆ. ಬಳಿಕ, ಲಾರಿಯಲ್ಲಿದ್ದ ಕಾಫಿ ಸರಕು ಸಂಬಂಧಿತ ಬಿಲ್ ನೀಡಲು ಚಾಲಕ ಆತೀಫ್ ಮುಂದಾದಾಗ, ಅವರು ₹50,000 ಲಂಚ  ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ನೀಡಲು ನಿರಾಕರಿಸಿದ ಆತೀಫ್‌ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಲಾಗಿದೆ.

ಘಟನೆ ಸಂಬಂಧ, ಆತೀಫ್ ಅವರ ಸ್ನೇಹಿತ ಹಾಗೂ ಹೇರೂರು ಗ್ರಾಮ ಪಂಚಾಯಿತಿ ಸದಸ್ಯ ಅಮ್ಜದ್ ಪೊಲೀಸ್ ದೂರು ನೀಡಿದ್ದಾರೆ. ‘ಇದು ಅಕ್ರಮವೆಂದು ಹೇಳಿದ ನನಗೂ ನಿಂದಿಸಿ, ಹಲ್ಲೆ ನಡೆಸಲಾಯಿತು. ಅಲ್ಲದೆ ಜೀವ ಬೆದರಿಕೆ ಹಾಕಲಾಯಿತು. ಸರ್ಕಾರಿ ವಾಹನ ದುರುಪಯೋಗ ಮಾಡಲಾಗಿದೆ’ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಸುದೀಪ್ ಮತ್ತು ಮಂಜು ಅವರನ್ನು ಬಂಧಿಸಿ ತಕ್ಷಣವೇ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಈ ಘಟನೆಯು ಸ್ಥಳೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನತೆ ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

9 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

9 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

12 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

14 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

14 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

14 hours ago