ನಮ್ಮ ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಸುಧಾರಿಸಲು ಬಹಳಷ್ಟು ಕಷ್ಟಗಳು ಎದುರಾಗುತ್ತಿವೆ. ಇದಕ್ಕೆ ಪ್ರಮುಖ ಕಾರಣವೆಂದರೆ ಎಲ್ಲಾ ಇಲಾಖೆಗಳಲ್ಲೂ ಬೇರುಹಾಸಿರುವ ಭ್ರಷ್ಟಾಚಾರ. ಈ ಸತ್ಯದಿಂದ ಶಿಕ್ಷಣ ಇಲಾಖೆಯೂ ಹೊರತಾಗಿಲ್ಲ ಎಂಬುದು ಇತ್ತೀಚಿನ ಘಟನೆಯಿಂದ ಮತ್ತೆ ಸಾಬೀತಾಗಿದೆ.
ಬಿಹಾರದ ಶಿಕ್ಷಣ ಇಲಾಖೆಯ ಡಿಸ್ಟ್ರಿಕ್ಟ್ ಎಜುಕೇಶನ್ ಆಫೀಸರ್ (ಡಿಇಒ) ರಜನೀಕಾಂತ್ ಪ್ರವೀಣ್ ಅವರ ಮನೆ ಮೇಲೆ ದಾಳಿ ನಡೆಸಿದಾಗ, ಅಧಿಕಾರಿಗಳು ನೋಟಿನ ಕಂತೆಗಳ ಹೊಟ್ಟೆಯನ್ನು ಕಂಡು ಅಚ್ಚರಿಗೊಳಗಾದರು. ಹಾಸಿಗೆಯ ಅಡಿಯಲ್ಲಿ ನೋಟಿನ ಬಂಡೆಗಳೇ ತುಂಬಿದ್ದವು. ಈ ನೋಟಿನ ಎಲ್ಲಾ ಕಂತೆಗಳು ₹500, ₹200 ಮತ್ತು ₹100 ಮುಖಬೆಲೆಯ ನೋಟಿಗಳಾಗಿದ್ದವು.
ಅಧಿಕಾರಿಗಳು ಈ ಹಣವನ್ನು ಎಣಿಸಲು ನೋಟು ಎಣಿಸುವ ಯಂತ್ರವನ್ನು ತರಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಅತಿ ಶ್ರಮದ ನಂತರ, ಈ ಹಣದ ಒಟ್ಟು ಮೊತ್ತ ₹1.87 ಕೋಟಿಯಷ್ಟಾಗಿತ್ತು. ರಜನೀಕಾಂತ್ ಸುಮಾರು 19 ವರ್ಷಗಳ ಸೇವಾ ಅನುಭವವನ್ನು ಹೊಂದಿದ್ದರೂ, ಈ ಅವಧಿಯಲ್ಲಿ ಅನೇಕ ಸ್ಥಳಗಳಲ್ಲಿ ಕೆಲಸ ಮಾಡಿದ್ದು, ತಮ್ಮದೇ ಒಂದು ಖಾಸಗಿ ಶಾಲೆಯನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಈ ಅಕ್ರಮ ಹಣವೇ ಆ ಶಾಲೆಯನ್ನು ನಿರ್ವಹಿಸಲು ಬಳಸಲಾಗುತ್ತಿದೆ ಎಂಬ ಶಂಕೆ ಉಂಟಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಈ ಹಣ ಯಾವ ಮೂಲಗಳಿಂದ ಬಂದಿತು, ಯಾರು ಒಳಗೊಂಡಿದ್ದಾರೆ ಎಂಬುದರ ಬಗ್ಗೆ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಈ ಘಟನೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿರುವ ಭ್ರಷ್ಟಾಚಾರದ ತೀವ್ರತೆಯನ್ನು ಮತ್ತೊಮ್ಮೆ ಗಮನಕ್ಕೆ ತಂದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…