ದೇಶ ಇಂದು ಪಂಡಿತ್ ಜವಾಹರ್ ಲಾಲ್ ನೆಹರು ಅವರ ಕೈಯಲ್ಲಿಲ್ಲ, ಅಂಬೇಡ್ಕರ್, ಭಗತ್ ಸಿಂಗ್ ಅವರ ಕೈಯಲ್ಲಿಲ್ಲ. ತನ್ನ ಪತ್ನಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಿಲ್ಲದವರ ಕೈಯಲ್ಲಿ ದೇಶ ಇದೆ ಎಂದು ಅಖಿಲ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಎಐಸಿಸಿ ಉಸ್ತುವಾರಿ ಕನ್ನಯ್ಯ ಕುಮಾರ್ ಪ್ರಧಾನಿ ಮೋದಿ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಸತ್ಯ ಹೇಳುವವರು ಎಂದಿಗೂ ಹೆದರಬಾರದು. ಸುಳ್ಳು ಹೇಳುವವರಿಗೆ ಹೆದರಿಕೆ ಸಹಜ. ಈ ದೇಶ ಪ್ರತಿಯೊಬ್ಬರಿಗೂ ಸೇರಿದ್ದು, ಎಲ್ಲರಿಗಾಗಿ ನಾವು ಹೋರಾಟ ಮಾಡೋಣ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಎಲ್ಲಾ ಅಂಗ ಸಂಸ್ಥೆಗಳು ದೇಶದ ಭದ್ರ ಬುನಾದಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದ ಅವರು ಯುವ ಕಾಂಗ್ರೆಸ್ ಆರ್.ಎಸ್.ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುವ ಸ್ಥಿತಿಲ್ಲಿಯಲ್ಲಿದ್ದು, ಯುವ ಸಮೂಹದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಬೇಕು ಎಂದರು. ಯುವ ಕಾಂಗ್ರೆಸ್ ಸತ್ಯಕ್ಕಾಗಿ ಸಂಘರ್ಷ ನಡೆಸುತ್ತಿದ್ದು, ನಮ್ಮ ಹಿರಿಯ ನಾಯಕರ ಆಶಯಗಳನ್ನು ಎಂದಿಗೂ ಮರೆಯಬಾರದು. ಯುವ ಜನರಿಗಾಗಿ ಏನು ಮಾಡಬೇಕು ಎಂಬುದನ್ನು ಅರಿಯಬೇಕು ಎಂದು ಕರೆ ನೀಡಿದರು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…