ದೇಶ ಇಂದು ಪಂಡಿತ್ ಜವಾಹರ್ ಲಾಲ್ ನೆಹರು ಅವರ ಕೈಯಲ್ಲಿಲ್ಲ, ಅಂಬೇಡ್ಕರ್, ಭಗತ್ ಸಿಂಗ್ ಅವರ ಕೈಯಲ್ಲಿಲ್ಲ. ತನ್ನ ಪತ್ನಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಿಲ್ಲದವರ ಕೈಯಲ್ಲಿ ದೇಶ ಇದೆ ಎಂದು ಅಖಿಲ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಎಐಸಿಸಿ ಉಸ್ತುವಾರಿ ಕನ್ನಯ್ಯ ಕುಮಾರ್ ಪ್ರಧಾನಿ ಮೋದಿ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಸತ್ಯ ಹೇಳುವವರು ಎಂದಿಗೂ ಹೆದರಬಾರದು. ಸುಳ್ಳು ಹೇಳುವವರಿಗೆ ಹೆದರಿಕೆ ಸಹಜ. ಈ ದೇಶ ಪ್ರತಿಯೊಬ್ಬರಿಗೂ ಸೇರಿದ್ದು, ಎಲ್ಲರಿಗಾಗಿ ನಾವು ಹೋರಾಟ ಮಾಡೋಣ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಎಲ್ಲಾ ಅಂಗ ಸಂಸ್ಥೆಗಳು ದೇಶದ ಭದ್ರ ಬುನಾದಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದ ಅವರು ಯುವ ಕಾಂಗ್ರೆಸ್ ಆರ್.ಎಸ್.ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುವ ಸ್ಥಿತಿಲ್ಲಿಯಲ್ಲಿದ್ದು, ಯುವ ಸಮೂಹದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಬೇಕು ಎಂದರು. ಯುವ ಕಾಂಗ್ರೆಸ್ ಸತ್ಯಕ್ಕಾಗಿ ಸಂಘರ್ಷ ನಡೆಸುತ್ತಿದ್ದು, ನಮ್ಮ ಹಿರಿಯ ನಾಯಕರ ಆಶಯಗಳನ್ನು ಎಂದಿಗೂ ಮರೆಯಬಾರದು. ಯುವ ಜನರಿಗಾಗಿ ಏನು ಮಾಡಬೇಕು ಎಂಬುದನ್ನು ಅರಿಯಬೇಕು ಎಂದು ಕರೆ ನೀಡಿದರು.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…