ಕಾರವಾರ: ಸರ್ಕಾರಿ ಆಸ್ಪತ್ರೆಯ ಔಷಧ ವಿತರಣಾ ಕೇಂದ್ರದಲ್ಲಿದ್ದ ಔಷಧಿ ಡಬ್ಬಿಗಳು ಕಣ್ಮರೆಯಾಗಿದ್ದು, ಆಸ್ಪತ್ರೆಯ ವೈದ್ಯರೊಬ್ಬರು ಅದನ್ನು ಅನಧಿಕೃತವಾಗಿ ಕೊಂಡೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.ಈ ಸುದ್ದಿಯನ್ನು ಭ್ರಷ್ಟರ ಬೇಟೆ ಪತ್ರಿಕೆ ಜನವರಿ ಸಂಚಿಕೆಯಲ್ಲಿ ಪ್ರಕಟವಾಗಿತ್ತು.ಉತ್ತರ ಕನ್ನಡ ಜಿಲ್ಲಾಧಿಕಾರಿ ಗಳು ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಔಷ ದ ಕದ್ದ ಕಳ್ಳ
ವೈದ್ಯ ಡಾ .ಸಂಗಮೇಶ ಪರಂಡಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಕೇಂದ್ರದಲ್ಲಿದ್ದ ದಾಸ್ತಾನು ಹಾಗೂ ರಿಜಿಸ್ಟರ್ ಪುಸ್ತಕದಲ್ಲಿದ್ದ ಔಷಧಿ ನಡುವೆ ವ್ಯತ್ಯಾಸ ಕಂಡು ಬಂದಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಡಿಸೆಂಬರ್ 10ರಂದು ಆಸ್ಪತ್ರೆಯ ವೈದ್ಯ ಡಾ ಸಂಗಮೇಶ ಪರಂಡಿ ಅನಧಿಕೃತವಾಗಿ ಔಷಧಿಗಳನ್ನು ಒಯ್ದಿರುವುದು ಪತ್ತೆಯಾಗಿತ್ತು. 25ರಷ್ಟು ಚೂರ್ಣದ ಡಬ್ಬಿಯನ್ನು ಅವರು ಒಯ್ದಿದ್ದರು. ಅವರು ಅದನ್ನು ಯಾವ ಉದ್ದೇಶಕ್ಕೆ ಒಯ್ದರು? ಯಾರಿಗೆ ವಿತರಿಸಿದರು? ಎಂದು ಮೇಲಧಿಕಾರಿಗಳು ಪ್ರಶ್ನಿಸಿದರೂ ಯಾವುದಕ್ಕೂ ಕ್ಯಾರೆ ಮಾಡದೆ ಏನು ಉತ್ತರಿಸಿರಲಿಲ್ಲ.
ಆಸ್ಪತ್ರೆಯ ಔಷಧ ನಾಪತ್ತೆಯಾಗಿರುವುದರಿಂದ ಔಷಧ ಸಂಗ್ರಹಣೆಯಲ್ಲಿ ತೊಂದರೆಯಾಗುವುದು, ರೋಗಿಗಳ ಅಗತ್ಯಕ್ಕೆ ತಕ್ಕ ಹಾಗೇ ಔಷಧ ನೀಡಲು ಆಗದಿರುವ ಬಗ್ಗೆ ಮೇಲಧಿಕಾರಿಗಳು ಸರ್ಕಾರಕ್ಕೆ ದೂರು ಸಲ್ಲಿಸಿದ್ದರು. ಈ ಹಿನ್ನಲೆ ಡಾ ಸಂಗಮೇಶ್ ಅವರಿಗೆ ಆಯುಷ್ ಇಲಾಖೆಯ ಆಯುಕ್ತರಿಂದ ನೋಟಿಸ್ ಜಾರಿಯಾಗಿತ್ತು.
ಆಯುಷ್ ಇಲಾಖೆ ಔಷಧಗಳು ಹಾಳಾಗಿರುವುದು ಹಾಗೂ ಅದನ್ನು ಸುಟ್ಟು ನಾಶ ಮಾಡಿದ ಬಗ್ಗೆ ಡಾ ಸಂಗಮೇಶ ಅವರು ಈ ಹಿಂದೆ ಸರ್ಕಾರಕ್ಕೆ ದೂರು ಸಲ್ಲಿಸಿದ್ದು, ಆ ಬಗ್ಗೆಯೂ ನೋಟಿಸ್ ಮೂಲಕ ಪ್ರಶ್ನಿಸಲಾಗಿದೆ. ಇದೇ ರೀತಿ ವರ್ತನೆ ಮುಂದುವರೆದರೆ ಸೇವೆಯಿಂದಲೇ ವಜಾ ಮಾಡುವ ಬಗ್ಗೆಯೂ ಆಯುಷ್ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆಯುಷ್ ಇಲಾಖೆಯಲ್ಲಿನ ಔಷಧಿಗಳ ಬಗ್ಗೆ ಡಾ ಸಂಗಮೇಶ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.ಈ ಹಿಂದೆ ತಾನೇ ಈ ಡಾಕ್ಟರ ಸಂಗಮೇಶ ಔಷಧಿಗಳನ್ನು ಅನಧಿಕೃತವಾಗಿ ಸುಟ್ಟು ಹಾಕಿ , ಬೆರೆಯವರ ಮೇಲೆ ಸುಳ್ಳು ದೂರು ಸಲ್ಲಿಸಿದ್ದರು. ಈಗ ಆ ಕೇಸ ಕೂಡ ಇವರ ಬುಡಕ್ಕೆ ಬಂದಿದ್ದು ಜಿಲ್ಲಾಧಿಕಾರಿಗಳ ಅಧಿಕೃತ ಆದೇಶ ಮಾತ್ರ ಭಾಕಿ ಇತ್ತು. ಇದಾದ ನಂತರ ಡಾ ಸಂಗಮೇಶ ಅವರ ಮೇಲೆ ರೋಗಿಯೊಬ್ಬರು ಹಲ್ಲೆ ನಡೆಸಿ ಅವರು ಆಸ್ಪತ್ರೆಗೆ ಸಹ ದಾಖಲಾಗಿದ್ದರು.ಪ್ರಕಟವಾಗಿತ್ತು.ಉತ್ತರ ಕನ್ನಡ ಜಿಲ್ಲಾಧಿಕಾರಿ ಗಳು ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಔಷ ದ ಕದ್ದ ಕಳ್ಳ
ವೈದ್ಯ ಡಾ .ಸಂಗಮೇಶ ಪರಂಡಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…