Categories: Latest

ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಕೇಂದ್ರದಲ್ಲಿದ್ದ ಔಷಧಿ ಕದ್ದ ಕಳ್ಳ ಡಾಕ್ಟರ ಅಮಾನತು.

ಕಾರವಾರ: ಸರ್ಕಾರಿ ಆಸ್ಪತ್ರೆಯ ಔಷಧ ವಿತರಣಾ ಕೇಂದ್ರದಲ್ಲಿದ್ದ ಔಷಧಿ ಡಬ್ಬಿಗಳು ಕಣ್ಮರೆಯಾಗಿದ್ದು, ಆಸ್ಪತ್ರೆಯ ವೈದ್ಯರೊಬ್ಬರು ಅದನ್ನು ಅನಧಿಕೃತವಾಗಿ ಕೊಂಡೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.ಈ ಸುದ್ದಿಯನ್ನು ಭ್ರಷ್ಟರ ಬೇಟೆ ಪತ್ರಿಕೆ ಜನವರಿ ಸಂಚಿಕೆಯಲ್ಲಿ ಪ್ರಕಟವಾಗಿತ್ತು.ಉತ್ತರ ಕನ್ನಡ ಜಿಲ್ಲಾಧಿಕಾರಿ ಗಳು ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಔಷ ದ ಕದ್ದ ಕಳ್ಳ
ವೈದ್ಯ ಡಾ .ಸಂಗಮೇಶ ಪರಂಡಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಕೇಂದ್ರದಲ್ಲಿದ್ದ ದಾಸ್ತಾನು ಹಾಗೂ ರಿಜಿಸ್ಟರ್ ಪುಸ್ತಕದಲ್ಲಿದ್ದ ಔಷಧಿ ನಡುವೆ ವ್ಯತ್ಯಾಸ ಕಂಡು ಬಂದಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಡಿಸೆಂಬರ್ 10ರಂದು ಆಸ್ಪತ್ರೆಯ ವೈದ್ಯ ಡಾ ಸಂಗಮೇಶ ಪರಂಡಿ ಅನಧಿಕೃತವಾಗಿ ಔಷಧಿಗಳನ್ನು ಒಯ್ದಿರುವುದು ಪತ್ತೆಯಾಗಿತ್ತು. 25ರಷ್ಟು ಚೂರ್ಣದ ಡಬ್ಬಿಯನ್ನು ಅವರು ಒಯ್ದಿದ್ದರು. ಅವರು ಅದನ್ನು ಯಾವ ಉದ್ದೇಶಕ್ಕೆ ಒಯ್ದರು? ಯಾರಿಗೆ ವಿತರಿಸಿದರು? ಎಂದು ಮೇಲಧಿಕಾರಿಗಳು ಪ್ರಶ್ನಿಸಿದರೂ ಯಾವುದಕ್ಕೂ ಕ್ಯಾರೆ ಮಾಡದೆ ಏನು ಉತ್ತರಿಸಿರಲಿಲ್ಲ.

ಆಸ್ಪತ್ರೆಯ ಔಷಧ ನಾಪತ್ತೆಯಾಗಿರುವುದರಿಂದ ಔಷಧ ಸಂಗ್ರಹಣೆಯಲ್ಲಿ ತೊಂದರೆಯಾಗುವುದು, ರೋಗಿಗಳ ಅಗತ್ಯಕ್ಕೆ ತಕ್ಕ ಹಾಗೇ ಔಷಧ ನೀಡಲು ಆಗದಿರುವ ಬಗ್ಗೆ ಮೇಲಧಿಕಾರಿಗಳು ಸರ್ಕಾರಕ್ಕೆ ದೂರು ಸಲ್ಲಿಸಿದ್ದರು. ಈ ಹಿನ್ನಲೆ ಡಾ ಸಂಗಮೇಶ್ ಅವರಿಗೆ ಆಯುಷ್ ಇಲಾಖೆಯ ಆಯುಕ್ತರಿಂದ ನೋಟಿಸ್ ಜಾರಿಯಾಗಿತ್ತು.

ಆಯುಷ್ ಇಲಾಖೆ ಔಷಧಗಳು ಹಾಳಾಗಿರುವುದು ಹಾಗೂ ಅದನ್ನು ಸುಟ್ಟು ನಾಶ ಮಾಡಿದ ಬಗ್ಗೆ ಡಾ ಸಂಗಮೇಶ ಅವರು ಈ ಹಿಂದೆ ಸರ್ಕಾರಕ್ಕೆ ದೂರು ಸಲ್ಲಿಸಿದ್ದು, ಆ ಬಗ್ಗೆಯೂ ನೋಟಿಸ್ ಮೂಲಕ ಪ್ರಶ್ನಿಸಲಾಗಿದೆ. ಇದೇ ರೀತಿ ವರ್ತನೆ ಮುಂದುವರೆದರೆ ಸೇವೆಯಿಂದಲೇ ವಜಾ ಮಾಡುವ ಬಗ್ಗೆಯೂ ಆಯುಷ್ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆಯುಷ್ ಇಲಾಖೆಯಲ್ಲಿನ ಔಷಧಿಗಳ ಬಗ್ಗೆ ಡಾ ಸಂಗಮೇಶ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.ಈ ಹಿಂದೆ ತಾನೇ ಈ ಡಾಕ್ಟರ ಸಂಗಮೇಶ ಔಷಧಿಗಳನ್ನು ಅನಧಿಕೃತವಾಗಿ ಸುಟ್ಟು ಹಾಕಿ , ಬೆರೆಯವರ ಮೇಲೆ ಸುಳ್ಳು ದೂರು ಸಲ್ಲಿಸಿದ್ದರು. ಈಗ ಆ ಕೇಸ ಕೂಡ ಇವರ ಬುಡಕ್ಕೆ ಬಂದಿದ್ದು ಜಿಲ್ಲಾಧಿಕಾರಿಗಳ ಅಧಿಕೃತ ಆದೇಶ ಮಾತ್ರ ಭಾಕಿ ಇತ್ತು. ಇದಾದ ನಂತರ ಡಾ ಸಂಗಮೇಶ ಅವರ ಮೇಲೆ ರೋಗಿಯೊಬ್ಬರು ಹಲ್ಲೆ ನಡೆಸಿ ಅವರು ಆಸ್ಪತ್ರೆಗೆ ಸಹ ದಾಖಲಾಗಿದ್ದರು.ಪ್ರಕಟವಾಗಿತ್ತು.ಉತ್ತರ ಕನ್ನಡ ಜಿಲ್ಲಾಧಿಕಾರಿ ಗಳು ಜಿಲ್ಲಾ ಆಯುಷ್ ಸರ್ಕಾರಿ ಆಸ್ಪತ್ರೆಯಲ್ಲಿನ ಔಷಧ ವಿತರಣಾ ಔಷ ದ ಕದ್ದ ಕಳ್ಳ
ವೈದ್ಯ ಡಾ .ಸಂಗಮೇಶ ಪರಂಡಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

7 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

14 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

14 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago